• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶೋತ್ಸವ ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸುತ್ತಿವೆ
ಹೊಯ್ಸಳ ಸಂಘದ ವತಿಯಿಂದ ಪುರಾಣ ಪ್ರಸಿದ್ಧ ಶ್ರೀ ಸದಾಶಿವ ಸ್ವಾಮಿ ದೇವಾಲಯದಲ್ಲಿ ಕಳೆದ 35 ವರ್ಷಗಳಿಂದ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅದ್ಧೂರಿಯಾಗಿ ವಿಸರ್ಜಿಸಲಾಗುತ್ತಿದೆ. ದೇಶದ ಅನೇಕ ರಾಜ್ಯಗಳಲ್ಲಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಗಣೇಶೋತ್ಸವ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಧಾರ್ಮಿಕ ಭಾವನೆ ಹೆಚ್ಚಾಗುವುದರ ಜೊತೆಗೆ ಒಗ್ಗಟ್ಟನ್ನು ಮೂಡಿಸುತ್ತಿದೆ. ಗ್ರಾಮದಲ್ಲಿ ನಡೆಯುತ್ತಿರುವ ಗಣೇಶೋತ್ಸವದಲ್ಲಿ ಮುಸ್ಲಿಂ ಜನಾಂಗವು ಉತ್ಸವದಲ್ಲಿ ಪಾಲ್ಗೊಂಡಿರುವುದು ತಮಗೆ ಹೆಚ್ಚು ಖುಷಿ ತರಿಸಿದೆ ನುಗ್ಗೇಹಳ್ಳಿ ಗಣೇಶೋತ್ಸವ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಭಾರತ್ ಸ್ಕೌಟ್ಸ್ ಗೈಡ್ಸ್ ಇರುವುದೇ ಸಮುದಾಯದ ಸೇವೆಗಾಗಿ
ಹಾಸನ ಜಿಲ್ಲಾಡಳಿತದ ಸಹಕಾರದಲ್ಲಿ ಪ್ರತಿವರ್ಷದಂತೆ ಸದರಿ ವರ್ಷವೂ ಸಹ ರಾಜ್ಯ ಮಟ್ಟದ ಸೇವಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ನಲವತ್ತಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ದಿನಕ್ಕೆ ಎರಡು ಪಾಳೆಯದಂತೆ ನಮ್ಮ ಮಕ್ಕಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರದಿ ಸಾಲಿನ ಶಿಸ್ತನ್ನು ಕಾಪಾಡುವುದು, ಬಾಯಾರಿದವರಿಗೆ ನೀರಿನ ಪೂರೈಕೆ ಮಾಡುವುದು, ವಯೋವೃದ್ಧರನ್ನು ವ್ಹೀಲ್‌ಚೇರಿನಲ್ಲಿ ಕರೆದುಕೊಂಡು ಹೋಗಿ ದರ್ಶನ ಮಾಡಿಸುವುದು, ಸ್ವಚ್ಛತಾ ಕಾರ್ಯ ಮಾಡುವುದು ಹೀಗೆ ಅನೇಕ ಕಡೆಗಳಲ್ಲಿ ಸೇವಾ ನಿರತರಾಗಿದ್ದಾರೆ ಎಂದು ವಿವರಿಸಿದರು.
ಕಲ್ಲಂಗೆರೆ ದೇವಸ್ಥಾನದಲ್ಲಿ ಚಂಡಿಕಾ ಹೋಮ
ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿ ಶ್ರೀ ಮಹಿಷಾಸುರ ಮರ್ದಿನಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ ಅರ್ಚನೆ ಬಣ್ಣ ಬಣ್ಣದ ಹೂವು ತೋಮಾಲೆಗಳಿಂದ ವಿಶೇಷವಾಗಿ ಅಲಂಕಾರಮಾಡಿದರು. ಅರಸೀಕೆರೆ ತಾಲೂಕಿನ ಕಸಬಾ ಹೋಬಳಿ ಕೆಲ್ಲಂಗೆರೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮಿನಾರಾಯಣ ಸ್ವಾಮಿ ದೇವಾಲಯದಲ್ಲಿ ಅಶ್ವಯುಜ ಮಾಸದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಇಂದು ಚಂಡಿಕಾ ಹೋಮ ವೈಭವದಿಂದ ನಡೆಯಿತು.
ಸ್ರೇಸನ್ ಫಾರ್ಮಾ ಮಾಲೀಕನಿಗೆ ಕಠಿಣ ಶಿಕ್ಷೆಯಾಗಲಿ
ಮಧ್ಯಪ್ರದೇಶದಲ್ಲಿ ವಿಷಯುಕ್ತ ರಾಸಾಯನಿಕ ಬೆರೆತಿರುವ ಕೋಲ್ಡ್ ರಿಪ್ ಕೆಮ್ಮಿನ ಸಿರಪ್ ಸೇವಿಸಿ 22 ಮಕ್ಕಳ ಸಾವಿಗೆ ಕಾರಣವಾಗಿರುವ ಸ್ರೇಸನ್ ಫಾರ್ಮ ಕಂಪನಿಯ ಮಾಲೀಕನಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಆಗ್ರಹಿಸಿದರು. ಮಹಾರಾಷ್ಟ್ರ ಹಾಗೂ ನಾಗಪುರದ ಆಸ್ಪತ್ರೆಗಳಲ್ಲಿ 5 ವರ್ಷದ ಒಳಗಿನ ಮಕ್ಕಳು ಸಾವಿಗೆ ತುತ್ತಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಸಣ್ಣ ಮಕ್ಕಳ ಆರೋಗ್ಯದ ವಿಚಾರದಲ್ಲಿ ಮಕ್ಕಳ ತಜ್ಞ ವೈದ್ಯರ ಭೇಟಿ ಸಲಹೆ ಸೂಚನೆ ಮೇರೆಗೆ ಔಷಧಿ ಮಾತ್ರೆಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.
ಪೊದೆಯಲ್ಲಿ ಹೊಳೆನರಸೀಪುರದ ಯುವಕನ ದೇಹ ಪತ್ತೆ
ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಸಮೀಪದ ಹೆದ್ದಾರಿ ಪಕ್ಕದಲ್ಲಿ ದ್ವಿಚಕ್ರ ವಾಹನ ಹಾಗೂ ಯುವಕನೊಬ್ಬನ ಮೃತದೇಹವನ್ನು ಗಿಡಗಂಟಿಗಳಿಂದ ಮುಚ್ಚಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಅಪಘಾತವೋ ಎಂದು ಪೊಲೀಸರ ತನಿಖೆಯಿಂದ ಪತ್ತೆಯಾಗಬೇಕಿದೆ. ಆದರೆ ಮೃತದೇಹ ಮೇಲಿನ ಗಾಯದ ಗುರುತು ಕಂಡ ಪ್ರತ್ಯಕ್ಷದರ್ಶಿಗಳು ಇದು ಭೀಕರ ಕೊಲೆ ಎಂದು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿವೈಎಸ್ಪಿ ಶಾಲು, ವೃತ್ತ ನಿರೀಕ್ಷಕ ಪ್ರದೀಪ್ ಹಾಗೂ ಪಿಎಸ್ಸೈಗಳಾದ ರಮೇಶ್ ಹಾಗೂ ನವ್ಯ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನಕ್ಕೆ ಕಳುಹಿಸಲಾಯಿತು. ಸುದೀಪ್‌ಗೆ ತಂದೆ, ತಾಯಿ, ಹಿರಿಯ ಸಹೋದರ, ಸಹೋದರಿ ಇದ್ದಾರೆ.
ಪುಸ್ತಕ ಸಂವಹನ ಹತ್ತಿಕ್ಕಲು ಸರ್ಕಾರ ಯತ್ನ
ಉದ್ದೇಶ ಪೂರ್ವಕವಾಗಿ ಪುಸ್ತಕಗಳ ಸಂವಹನವನ್ನು ಹತ್ತಿಕ್ಕುವ ಕಾರ್ಯ ಸರ್ಕಾರದಿಂದ ಆಗುತ್ತಿದೆ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೆಲಸ ಮಾಡಿ
ಮಕ್ಕಳನ್ನು ದಡ್ಡರು ಎಂದು ಕೈತೊಳೆದು ಕೊಳ್ಳವ ಸಂಸ್ಕೃತಿ ಬಿಟ್ಟು, ಅವರನ್ನು ಜವಾಬ್ದಾರಿಯಿಂದ ವಿದ್ಯಾವಂತರನ್ನಾಗಿ ಮಾಡುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಸರ್ಕಾರ ಜವಾಬ್ದಾರಿಯಿಂದ ಶಿಕ್ಷಣಕ್ಕೆ ಸಕಲ ಸವಲತ್ತುಗಳನ್ನು ಒದಗಿಸಿದೆ ಪ್ರಾಮಾಣಿಕತನ ಹಾಗೂ ಶ್ರದ್ಧೆಯಿಂದ ಪಾಠ ಮಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷಕರಿಗೆ ಸಲಹೆ ನೀಡಿದರು.
ಕನ್ನಡ ಕಟ್ಟಲು ಹಿಂಸಾತ್ಮಕವಾದ ಸಿಟ್ಟು ಬೇಕಿಲ್ಲ: ವೈ.ಎಸ್.ವಿ. ದತ್ತ
ಕಡೂರು, ಕನ್ನಡ ಕಟ್ಟಲು ಈಗ ತುರ್ತಾಗಿ ಸಾತ್ವಿಕವಾದ ರೋಷ ಮತ್ತು ಸಿಟ್ಟು ಅಗತ್ಯವಿದೆಯೇ ವಿನಃ ಹಿಂಸಾತ್ಮಕವಾದ ಸಿಟ್ಟು ಬೇಕಿಲ್ಲ ಎಂದು ಚಿಂತಕ ವೈ.ಎಸ್.ವಿ. ದತ್ತ ಅಭಿಪ್ರಾಯಪಟ್ಟರು.
ಹುತಾತ್ಮ ಯೋಧರ ಸ್ಮರಣೆ ನಿರಂತರವಾಗಲಿ: ಜಗದೀಶ್
ಬೀರೂರು‘ದೇಶ ಸೇವೆಗೆ ಸಮರ್ಪಿಸಿಕೊಂಡು, ಜೀವದಾನ ಮಾಡಿದ ವೀರಯೋಧರ ಸ್ಮರಣೆ ನಿರಂತರವಾಗಿರಬೇಕು’ ಎಂದು ಕೇಂದ್ರೀಯ ಮೀಸಲು ಪಡೆ ಬೆಂಗಳೂರು ಗ್ರೂಪ್ ಸೆಂಟರ್‌ ನ ಎಸ್ಐ ಎಂ.ಆರ್. ಜಗದೀಶ್ ತಿಳಿಸಿದರು.
ವಿದ್ಯೆಯೊಂದೇ ಕೊನೆಯವರೆಗೂ ಉಳಿಯುವ ಸಾಧನ: ನಿವೃತ್ತ ಶಿಕ್ಷಕಿ ಸುನೀತಾ ಕಟ್ಟಿ
ಸಮಾಜದಲ್ಲಿ ಏಳಿಗೆಯನ್ನು ಸಾಧಿಸಬೇಕು ಎಂದರೇ ವಿದ್ಯೆ ಒಂದೇ ಅವರನ್ನು ಕೈ ಹಿಡಿಯುವುದು. ನನ್ನ ಶಿಕ್ಷಕ ವೃತ್ತಿಯನ್ನು ವಿಜಯಪುರದಲ್ಲಿ ಆರಂಭಿಸಿದ ದಿನದಿಂದ ಇಲ್ಲಿಯವರೆಗೂ ನಾನು ಕಂಡಂತೆ ಇಲ್ಲಿನ ವಿದ್ಯಾರ್ಥಿಗಳು ಹಠವಾದಿಗಳು, ವಿದ್ಯೆ ಕಲಿತು ತಾವು ಏನಾದರೂ ಸಾಧಿಸಲೇಬೇಕು ಎಂಬ ಛಲ ಹೊಂದಿರುವ ಕಾರಣದಿಂದಲೇ ಇಲ್ಲಿ ವ್ಯಾಸಂಗ ಮಾಡಿರುವ ಅದೆಷ್ಟೋ ವಿದ್ಯಾರ್ಥಿಗಳು ಇಂದು ದೇಶದ ವಿವಿಧ ಭಾಗಗಳಲ್ಲಿ ಉನ್ನತ ಸ್ಥಾನಮಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ .
  • < previous
  • 1
  • ...
  • 569
  • 570
  • 571
  • 572
  • 573
  • 574
  • 575
  • 576
  • 577
  • ...
  • 14638
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved