ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ; ಜಿಲ್ಲಾದ್ಯಂತ ರಸ್ತೆ ತಡೆ ಇಂದುಭತ್ತವನ್ನು ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿಸದಂತೆ ಆದೇಶ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಈ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ ಬಣವು ಸಭೆ ಬಹಿಷ್ಕರಿಸಿ, ಜಿಲ್ಲಾದ್ಯಂತ ಮೇ 17ರಂದು ಜಿಲ್ಲಾದ್ಯಂತ ರಸ್ತೆ ತಡೆ ಚಳವಳಿ ನಡೆಸಲಿದೆ.