• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾರಾಷ್ಟ್ರದ ಟೆಂಪೋ ಚಾಲಕ ಹೃದಯಾಘಾತದಿಂದ ಸಾವು
ಶುಕ್ರವಾರ ಬೆಳಗ್ಗೆ 6:15ರ ಸುಮಾರಿಗೆ ಈತನಿಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಟೆಂಪೋ ಕ್ಲೀನರ್ ಸೇರಿದಂತೆ ಇತರ ವಾಹನಗಳ ಚಾಲಕರು ಶುಭಂ ಘೋರ್ಪಡೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾನೆ.
ಶ್ರೀ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ನೋಟಿನ ಅಲಂಕಾರ
ದೇವಿಯನ್ನು ನೋಟಿನಿಂದ ಅಲಂಕಾರ ಮಾಡಿದ್ದರಿಂದ ಧನಲಕ್ಷ್ಮೀ ಅವತಾರದಲ್ಲಿ ಭಕ್ತರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಪ್ರತಿ ವರ್ಷ ಈ ದೇವಾಲಯದಲ್ಲಿ ಎಲ್ಲಾ ಬಗೆಯ ನೋಟುಗಳ ಸಂಗ್ರಹಿಸಿ ದೇವಿಗೆ ನೋಟಿನ ಅಲಂಕಾರ ಮಾಡುವುದು ಪ್ರಸಿದ್ದಿಗೊಂಡಿದೆ.
ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ರಾಧಾ ಕೃಷ್ಣ ವೇಷಧಾರಿ ಸ್ಪರ್ಧೆ
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹತ್ತು ವರ್ಷಗಳ ಒಳಪಟ್ಟ ಮಕ್ಕಳಿಗೆ ರಾಧಾ-ಕೃಷ್ಣ ವೇಷಧಾರಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಕರಡಿಗಾಲ ಹರೀಶ್ ಹೇಳಿದರು. ವಿಜೇತ ಮೊದಲ ೧೦ ಮಕ್ಕಳಿಗೆ ನಗದು ಬಹುಮಾನ ಹಾಗೂ ಪಾರಿತೋಷಕ, ಭಾಗವಹಿಸುವ ಎಲ್ಲಾ ಮಕ್ಕಳಿಗೂ ನೆನಪಿನ ಕಾಣಿಕೆ ನೀಡಲಾಗುವುದು. ವಯೋಮಿತಿ ೧೦ ವರ್ಷದೊಳಗಿರುವ ಮಕ್ಕಳಿಗೆ ಮಾತ್ರ ಅವಕಾಶವಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಗೆ ಜೆಡಿಎಸ್‌ನಿಂದ ನಾಮಪತ್ರ
ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆ ಇದೇ ತಿಂಗಳು ೨೧ರಂದು ನಡೆಯಲಿದ್ದು, ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದಂದು ಜೆಡಿಎಸ್ ಪಕ್ಷ ಬೆಂಬಲಿತ ೧೩ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಎಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು. ಆಗಸ್ಟ್ ೨೧ರಂದು ನಡೆಯಲಿರುವ ಎಚ್‌ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ೧೩ ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಧರ್ಮಸ್ಥಳದ ಅಹಿತಕರ ಬೆಳವಣಿಗೆಗಳಿಂದ ಹಿಂದೂಗಳ ಭಾವನೆಗೆ ಧಕ್ಕೆ
ಧರ್ಮಸ್ಥಳ ಹಿಂದೂಗಳ ಶ್ರದ್ಧಾಭಕ್ತಿಯ ಕೇಂದ್ರವಾಗಿ ಹೆಸರುವಾಸಿಯಾಗಿದೆ. ಇಂತಹ ಸ್ಥಳದ ಮೇಲೆ ಕೆಟ್ಟ ಹೆಸರು ತರುವ ಕೆಲಸ ಆಗಬಾರದು. ಇದೀಗ ಅಲ್ಲಿ ನಡೆಯುತ್ತಿರುವ ಅಹಿತಕರ ಬೆಳವಣಿಗೆಗಳು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿವೆ ಎಂದು ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. ಪಕ್ಷಾತೀತವಾಗಿ ಸಮಾನ ಅನುದಾನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.ಎಲ್ಲಾ ಕ್ಷೇತ್ರದಲ್ಲಿಯೂ ಎಲ್ಲಾ ಪಕ್ಷದ ಕಾರ್ಯಕರ್ತರು ಮುಖಂಡರು, ಮತದಾರರು ಇದ್ದಾರೆ. ಆದರೆ ಕಾಂಗ್ರೆಸ್ ಶಾಸಕರಿಗೆ ಹೆಚ್ಚು ಅನುದಾನ ಹಾಗೂ ಜೆಡಿಎಸ್, ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ನೀಡುವುದು ಸರಿಯಾದ ಬೆಳವಣಿಗೆ ಅಲ್ಲ ಎಂದರು.
ಕೃಷ್ಣ ಭೈರೇಗೌಡ್ರು ಬಹಳ ಶಿಸ್ತು ಎಂದ ಸೂರಜ್ ರೇವಣ್ಣ
ಹೊಸದಾಗಿ ಕೃಷ್ಣಭೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದು, ಅವರು ಬಹಳ ಡಿಸಿಪ್ಲೀನ್ ಉಳ್ಳವರು. ಒಳ್ಳೆಯ ರೀತಿಯ ಕಾರ್ಯವೈಖರಿ ಬಗ್ಗೆ ಕೇಳಿದ್ದೇನೆ. ಒಳ್ಳೆಯ ರೀತಿಯ ಕೆಲಸ ಆಗಲಿದೆ ಎನ್ನುವ ನಿರೀಕ್ಷೆ ಇದೆ. ರೈತರು ಗೊಬ್ಬರ ಕೇಳಿದರೆ ಕೇಂದ್ರದಿಂದ ಬರಬೇಕು ಅಂತಾರೆ. ಹಾಗಿದ್ದರೆ ರಾಜ್ಯ ಸರ್ಕಾರ ಏನು ಮಾಡುತ್ತಿದೆ. ಮಳೆ ಹಾನಿಯಿಂದ ಎಷ್ಟು ಸಮಸ್ಯೆ ಆಗಿದೆ. ಬರ್ತಾರೆ ಹೋಗ್ತಾರೆ. ಏನಾದ್ರು ಪರಿಹಾರ ಕೊಟ್ಟಿದಾರಾ! ಹಿಂದೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ರೈತರಿಗೆ ಏನೆಲ್ಲಾ ಅನುಕೂಲ ಮಾಡಿದ್ದರು. ಈಗ ಬರೀ ಗ್ಯಾರಂಟಿ ಒಂದೇ ಅಜೆಂಡಾ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಸಳೂರು ವ್ಯಾಪ್ತಿಯಲ್ಲಿ ಅರಣ್ಯ ಒತ್ತುವರಿ ತೆರವು
ವರಮಹಾಲಕ್ಷ್ಮೀ ಹಬ್ಬದಂದೆ ತಾಲೂಕಿನ ಯಸಳೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಯಸಳೂರು ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತುವರಿ ತೆರವು ಮಾಡಿದ್ದು ಇದು ಮಲೆನಾಡಿಗರಲ್ಲಿ ಆತಂಕ ಮೂಡಿಸಿದೆ. ಯಸಳೂರು ಹೋಬಳಿಯ ಕೊತ್ತನಹಳ್ಳಿ ಅಕೇಷಿಯಾ ನೆಡುತೋಪಿನಲ್ಲಿ ಎಡಕೇರಿ ಗ್ರಾಮದ ವೈ.ಟಿ ಪಾರ್ವತಮ್ಮ ಕೋ ಮಂಜೇಗೌಡ ಮತ್ತು ವೈ.ಎಂ ನಾಗರಾಜು ಬಿನ್ ಮಂಜೇಗೌಡ ಎಂಬುವರು ಸುಮಾರು ೩೦ ಎಕರೆ ಅರಣ್ಯ ಪ್ರದೇಶದಲ್ಲಿ ೧೨ ಎಕರೆಗೂ ಹೆಚ್ಚು ಜಾಗದಲ್ಲಿ ಬೇಲಿ ಮಾಡಿ ಒತ್ತುವರಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ೧೧ ಗಂಟೆಯ ವೇಳೆಗ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒತ್ತುವರಿ ತೆರವುಗೊಳಿಸಿರುತ್ತಾರೆ.
ರೇಷ್ಮೆ ಬೆಳೆಯನ್ನು ಮಿಶ್ರ ಬೆಳೆಯಾಗಿ ಅನುಸರಿಸಿದರೆ ಹೆಚ್ಚು ಲಾಭ
ರೈತರು ಕೃಷಿಯಲ್ಲಿ ಮಿಶ್ರ ಬೆಳೆಯಾಗಿ ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುವುದರ ಜೊತೆಗೆ ಹೆಚ್ಚಿನ ಲಾಭ ಗಳಿಸಬಹುದಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ತಾಲೂಕಿನಲ್ಲಿ ಒಟ್ಟು 135 ಗ್ರಾಮಗಳಲ್ಲಿ 934 ರೇಷ್ಮೆ ಬೆಳೆಯುವ ರೈತರಿದ್ದು ಸುಮಾರು 684 ಹೆಕ್ಟೇರ್‌ ಪ್ರದೇಶದಲ್ಲಿ ಹಿಪ್ಪು ನೇರಳೆ ಬೆಳೆಯನ್ನು ಬೆಳೆಯಲಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ರೈತರು ಪಡೆದುಕೊಂಡು ರೇಷ್ಮೆ ಬೆಳೆಯಲ್ಲಿ ಹೆಚ್ಚು ಇಳುವರಿ ಪಡೆಯುವ ಮೂಲಕ ಹೆಚ್ಚು ಲಾಭ ಗಳಿಸುವಂತೆ ಸಲಹೆ ನೀಡಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕನ್ನಡಪ್ರಭ ಯುವ ಆವೃತ್ತಿ ವರದಾನ
ಕನ್ನಡಪ್ರಭ ಯುವ ಆವೃತ್ತಿ ಸಂಚಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಮೀಸಲಾದ ಶೈಕ್ಷಣಿಕ ವಿಷಯಗಳು, ಅನೇಕ ಶೈಕ್ಷಣಿಕ ವಿಷಯದ ಚಟುವಟಿಕೆಗಳು ಮತ್ತು ಉದ್ಯೋಗ ವಾರ್ತೆಯಂತಹ ಉಪಯುಕ್ತ ಮಾಹಿತಿಗಳಿದ್ದು, ವಿದ್ಯಾರ್ಥಿಗಳು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಮೊಬೈಲ್‌ ಬಿಡಿ ಕನ್ನಡಪ್ರಭದ ಯುವ ಆವೃತ್ತಿ ಕೈ ಲಿ ಹಿಡಿದು ಓದಿ, ಭವಿಷ್ಯದ ಅಭಿವೃದ್ಧಿಗೆ ಜ್ಞಾನ ಸಂಗ್ರಹ ಮಾಡಿಕೊಳ್ಳಬೇಕು. ಇದರ ಉಪಯೋಗವನ್ನು ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.
ಭಾರತದ ಸಂಸ್ಕೃತಿ ಸನಾತನ ಹಿಂದೂ ಧರ್ಮದ ತಳಹದಿಯ ಮೇಲೆ ನಿಂತಿದೆ
ಪ್ರತಿ ಗ್ರಾಮಗಳಲ್ಲಿಯೂ ದೇಗುಲ ಹಾಗೂ ಶಾಲೆಗಳು ಇರಬೇಕು. ದೇಗುಲದ ಗಂಟೆ ಹಾಗೂ ಶಾಲೆಯ ಗಂಟೆ ಶಬ್ದ ಮೊಳಗಬೇಕು. ಶಾಲೆಯಿಂದ ಶಿಕ್ಷಣ ಮತ್ತು ದೇಗುಲಗಳಿಂದ ಧರ್ಮ, ಸಂಸ್ಕೃತಿ ಹಾಗೂ ಸಂಸ್ಕಾರ ಬೆಳೆಯುತ್ತದೆ ಎಂದರು. ಇತ್ತೀಚಿನ ವರ್ಷಗಳಿಂದ ತಾಲೂಕಿನಾದ್ಯಂತ ದೇಗುಲಗಳು ಬಹುತೇಕ ಜೀರ್ಣೋದ್ಧಾರದೊಂದಿಗೆ ಲೋಕಾರ್ಪಣೆಗೊಂಡಿವೆ. ದೇಗುಲಗಳ ನಿರ್ಮಾಣಕ್ಕೆ ಶಾಸಕರ ನಿಧಿ ಹಾಗೂ ವೈಯಕ್ತಿಕವಾಗಿ ಸಾಕಷ್ಟು ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.
  • < previous
  • 1
  • ...
  • 636
  • 637
  • 638
  • 639
  • 640
  • 641
  • 642
  • 643
  • 644
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved