ಸೈನಿಕರ ಆತ್ಮಸ್ಥೈರ್ಯಕ್ಕಾಗಿ ತಿರಂಗಾ ಯಾತ್ರೆಕನ್ನಡಪ್ರಭ ವಾರ್ತೆ ಸಿಂದಗಿ ಉಗ್ರಗಾಮಿಗಳ ನಿರ್ನಾಮಕ್ಕೆ ಸಂಕಲ್ಪ ಮಾಡಿರುವ ವೀರ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಗರದಲ್ಲಿ ಶನಿವಾರ ತಿರಂಗಾ ಯಾತ್ರೆಯನ್ನು ನಡೆಸಲಾಯಿತು. ಯಾತ್ರೆಯಲ್ಲಿ ನಿವೃತ್ತ ಯೋಧರು, ವಿವಿಧ ಮಠಾಧೀಶರು, ಮಾಜಿ ಶಾಸಕರು, ರಾಜಕೀಯ ಧುರೀಣರು, ರೈತರು, ಮಹಿಳೆಯರು, ಯುವಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿ ರಾಷ್ಟ್ರಾಭಿಮಾನಿಗಳು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತ ಆಪರೇಷನ್ ಸಿಂದೂರದಲ್ಲಿ ಪಾಲ್ಗೊಂಡ ಸೈನಿಕರಿಗೆ ನೈತಿಕ ಬೆಂಬಲ ನೀಡಿದರ