ಉಗ್ರರ ದಾಳಿಯ ಅಣಕು ಪ್ರದರ್ಶನಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿಯ ಜಲಾಶಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಭಯೋತ್ಪಾದಕರು ದಾಳಿ ನಡೆಸಿದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು, ವಿಜಯಪುರ, ಬಾಗಲಕೋಟೆ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಅಣಕು ಪ್ರದರ್ಶನ ನಡೆಸಲಾಯಿತು. ಎರಡು ಜಿಲ್ಲೆಗಳ ಪೊಲೀಸರು, ಅಗ್ನಿಶಾಮಕ ಸೇರಿದಂತೆ ನಾನಾ ಇಲಾಖೆಗಳು ಸೇರಿ ಅಣಕು ಕಾರ್ಯಾಚರಣೆ ನಡೆಸಿದರು. ಶನಿವಾರ ಬೆಳಿಗ್ಗೆಯಿಂದಲೇ ಎರಡು ಜಿಲ್ಲೆಯ ಎಸ್ಪಿಗಳು ಖುದ್ದಾಗಿ ಮಾರ್ಗದರ್ಶನ ನೀಡಿ ಅಣಕು ಪ್ರದರ್ಶನಕ್ಕೆ ಸಿಬ್ಬಂದಿ ಸಜ್ಜುಗೊಳಿಸಿದರು.