ಸಿದ್ದರಾಮಯ್ಯ ಸರ್ಕಾರ ಎಡಬಿಡಂಗಿ ಸರ್ಕಾರಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಎಂಬ ಹೆಸರಿನಲ್ಲಿ ಸರ್ಕಾರ ಜಾತಿ ಆಧಾರಿತ ರಾಜಕೀಯಕ್ಕೆ ಇಂಧನ ಹಾಕುತ್ತಿದೆ. ಹೈಕೋರ್ಟ್ ಸ್ಪಷ್ಟವಾಗಿ ಹೇಳಿದರೂ, ಧಮ್ಕಿ ಹಾಕಿ ಸಮೀಕ್ಷೆ ಮಾಡಿಸುತ್ತಿದ್ದಾರೆ. ಇದು ಸಂವಿಧಾನ ಬಾಹಿರ ನಡೆ ಎಂದು ತೀವ್ರ ಟೀಕೆ ಮಾಡಿದರು. ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೇಳುವಾಗ, “ಹದಿನೈದು ದಿನಗಳಲ್ಲಿ ಮುಗಿಸುತ್ತೇನೆ ಎಂದು ಹಠ ಹಿಡಿದ ಸಿಎಂ ಈಗ ಮೂರನೇ ಬಾರಿಗೆ ಅವಧಿ ವಿಸ್ತರಣೆ ಮಾಡಿದ್ದಾರೆ. ತರಬೇತಿ ಇಲ್ಲ, ಯೋಜನೆ ಇಲ್ಲ, ಬರೀ ಬೆದರಿಕೆ ಇದೆ. ಇದು ಸರ್ಕಾರದ ವೈಫಲ್ಯದ ಕನ್ನಡಿ ಎಂದರು.