400 ಪಟ್ಟು ಹೆಚ್ಚಿದ ಯೋಜನಾ ವೆಚ್ಚ..!ಕರಾವಳಿ ಹಾಗೂ ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಹುಬ್ಬಳ್ಳಿಯನ್ನು ಸಂಪರ್ಕಿಸುವ ಹಲವು ಬಗೆಯ ಉದ್ಯಮಗಳಿಗೆ ಉತ್ತೇಜನ ನೀಡುವ ಹುಬ್ಬಳ್ಳಿ- ಅಂಕೋಲಾ ಬಗ್ಗೆ ರಾಜ್ಯಸಭೆಯಲ್ಲಿ ಇತ್ತೀಚಿಗೆ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ ಅವರು ಪ್ರಸ್ತಾಪಿಸಿದ್ದಾರೆ. ಯೋಜನೆಗೆ ಇನ್ನು ರೈಲ್ವೆ ಅಭಿವೃದ್ಧಿ ಮಂಡಳಿಯಿಂದ ಅಧಿಕೃತವಾಗಿ ಅನುಮೋದನೆ ಸಿಕ್ಕಿಲ್ಲ. ಆದರೆ, ರೈಲ್ವೆ ಸಚಿವರೇ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿರುವುದರಿಂದ ಯೋಜನೆಗೆ ಹಸಿರು ನಿಶಾನೆ ಸಿಗುವ ಕಾಲ ಸನ್ನಿಹಿತ ಎಂಬುದು ಮಾತ್ರ ಸ್ಪಷ್ಟ.