• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ಶೀಘ್ರ ಚಾಲನೆ: ಶಾಸಕ ಕೆ.ಎಂ.ಉದಯ್
ಬನ್ನಹಳ್ಳಿ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಮಸ್ಯೆ ಹಾಗೂ ಅನುದಾನದ ಕೊರತೆ ಹಾಗೂ ರೈತರ ಜಮೀನುಗಳಲ್ಲಿ ವಿದ್ಯುತ್ ಸ್ಥಾವರ ಸ್ಥಾಪನೆಗೆ ಕೆಲ ರೈತರಿಂದ ವಿರೋಧ ವ್ಯಕ್ತವಾಗಿತ್ತು. ಈಗಾಗಲೇ ನಾಲ್ಕೈದು ಬಾರಿ ರೈತರೊಂದಿಗೆ ಮಾತುಕತೆ ನಡೆಸಿ ಅವರಿಗೆ ಪರಿಹಾರ ನೀಡಲು ಮನವೊಲಿಸಲಾಗಿದೆ.
ಶಾಲಾ ಮಕ್ಕಳ ಕಲಾ ಪ್ರತಿಭೆ, ಸಿದ್ಧತೆ ನಟನೆಗೆ ಪ್ರೇಕ್ಷಕರ ಮೆಚ್ಚುಗೆ
ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಂದ ವೈವಿಧ್ಯಮಯ ನಾಟಕಗಳು ಪ್ರದರ್ಶನಗೊಂಡು ಮಕ್ಕಳಲ್ಲಿನ ಕಲಾತ್ಮತೆ ಅನಾವರಣಗೊಂಡಿತ್ತು. ಶಾಲೆಯ ಮಕ್ಕಳು ಮೂಡಲಪಾಯ ಶೈಲಿಯ ಯಕ್ಷಗಾನ ಮತ್ತು ಕರ್ಣಾರ್ಜುನ ಕಾಳಗ ನಾಟಕ ಅತ್ಯಂತ ಮೆಚ್ಚುಗೆ ಗಳಿಸಿತು.
ಬಾಲ್ಯದಿಂದಲೇ ತಂದೆ, ತಾಯಿ, ಗುರು ಹಿರಿಯನ್ನು ಗೌರವಿಸಿ: ಕೆ.ಎಸ್.ಗೋಪಾಲಕೃಷ್ಣ
ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ವಿಷಯಗಳಲ್ಲಿಯೇ ಹೆಚ್ಚಿನ ಆಸಕ್ತಿಯಿಂದ ಅಭ್ಯಾಸ ಮಾಡುವ ಮೂಲಕ ಉತ್ತಮ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕು. ಎಲ್ಲ ವಿಭಾಗಗಳಲ್ಲೂ ಭವಿಷ್ಯದ ದಾರಿಗೆ ಬೇಕಾದ ಆಯ್ಕೆಗಳಿವೆ. ಓದಿನಲ್ಲಿ ಸಮಯ ಪಾಲನೆ ಬಹಳ ಮುಖ್ಯ. ಪ್ರತಿದಿನ ಇಂತಿಷ್ಟು ಗಂಟೆಯಂತೆ ಅಭ್ಯಾಸ ಮಾಡಬೇಕು.
ಮಳವಳ್ಳಿಯಲ್ಲಿ ಶಾಸಕರಿಂದ ನಮ್ಮ ಕ್ಲಿನಿಕ್‌ ಉದ್ಘಾಟನೆ
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸುಧಾರಿತ ಚಿಕಿತ್ಸೆಗಳ ಮೂಲಕ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ 13ನೇ ವಾರ್ಡ್ ನಲ್ಲಿ ಮತ್ತೊಂದು ಕ್ಲಿನಿಕ್ ತೆರಯಲು ಚಿಂತನೆ ನಡೆಸಲಾಗಿದೆ. ತುರ್ತು ಆರೋಗ್ಯ ಸೇವೆಗೆ ಇದು ಅಗತ್ಯವಾಗಿದೆ.
ಹುಲಿಗಳ ನೆಲೆ ಸಂರಕ್ಷಣೆ ಮಾಡಬೇಕಿದೆ: ವಿ.ತೇಜಸ್
ಒಂದು ಕಾಡಿನಲ್ಲಿ ಹುಲಿ ಸಂತತಿ ವಾಸವಾಗಿದೆ ಎಂದರೆ ಆ ಕಾಡು ಸಮೃದ್ಧವಾಗಿದೆ ಎಂದರ್ಥ. ಹುಲಿಗಳ ಆಹಾರಕ್ಕಾಗಿ ವಾರ್ಷಿಕ ಸುಮಾರು 50ಕ್ಕೂ ಹೆಚ್ಚು ಬಲಿ ಪ್ರಾಣಿಗಳು ಬೇಕಾಗಲಿವೆ. ಹುಲಿ ಕಾಡಿನಲ್ಲಿ ಕಾಟಿ, ಜಿಂಕೆ, ಕೃಷ್ಣಾಮೃಗ, ಕಾಡು ಹಂದಿ ಸೇರಿದಂತೆ ಹಲವು ಬಗೆಯ ಬಲಿ ಪ್ರಾಣಿಗಳು ಸಮೃದ್ಧವಾಗಿ ಇದ್ದಾಗ ಹುಲಿಗಳ ಸಂತತಿ ಹೆಚ್ಚಲು ಸಾಧ್ಯ.
ಪತ್ರಕರ್ತರಿಗೆ ನಿವೇಶನಕ್ಕೆ ಕಾನೂನು ಸಡಿಲಿಸಿ
ಹಾಸನ ನಗರದ ಸಮೀಪ ಪವನಪುತ್ರ ರೆಸಾರ್ಟ್‌ನಲ್ಲಿ ಶನಿವಾರ ನಡೆದ ಮಾಧ್ಯಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಿಜಿಟಲ್ ಮಾಧ್ಯಮ ತಾತ್ಕಾಲಿಕವಾಗಿದ್ದು, ಮುದ್ರಣ ಮಾಧ್ಯಮವೇ ಭವಿಷ್ಯದಲ್ಲಿ ಉಳಿಯಲಿದೆ ಎಂದು ಅಭಿಪ್ರಾಯಪಟ್ಟರು. ಪ್ರಸ್ತುತ ಗೃಹ ಮಂಡಳಿಯಲ್ಲಿ ಸುಮಾರು ೬,೫೦೦ ನಿವೇಶನಗಳು ಲಭ್ಯವಿದ್ದು, ಅವುಗಳನ್ನು ಹಂಚಿಕೆ ಮಾಡುವ ಅಧಿಕಾರ ಸಚಿವ ಸಂಪುಟಕ್ಕೆ ಮಾತ್ರ ಇದೆ. ಈ ಕಾನೂನನ್ನು ಸಡಿಲಿಸಿ ಪತ್ರಕರ್ತರಿಗೆ ನಿವೇಶನ ನೀಡುವಂತೆ ಶಾಸಕರು ಸರ್ಕಾರವನ್ನು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಕರ್ತರ ಮೇಲೆ ವಿಶೇಷ ಕಾಳಜಿ ಇದೆ ಎಂದೂ ಅವರು ತಿಳಿಸಿದರು.
ನಾಲೆ ನೀರು ಹರಿದು ಬೆಳೆನಾಶ
ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮ ಸಮೀಪ ಶ್ರೀರಾಮದೇವರ ಅಣೆಕಟ್ಟೆಯ ದಕ್ಷಿಣ ನಾಲೆ ಸಾಗಿದ್ದು, ನಾಲೆಯಲ್ಲಿ ಹೂಳು ತೆರವುಗೊಳಿಸದ ಕಾರಣ ನಾಲೆ ತುಂಬ ನೀರು ಹರಿದು ಹತ್ತಾರು ಎಕರೆಗಳಲ್ಲಿನ ಬೆಳಗಳು ನಾಶವಾಗಿರುವ ಘಟನೆ ಗ್ರಾಮದ ಸಮೀಪ ನಡೆದಿದೆ. ನೀರಾವರಿ ಇಲಾಖೆಯ ಅದಿಕಾರಿಗಳು ಬೇಜಾವಬ್ದಾರಿಯಿಂದ ನಾವುಗಳು ಬೆಳೆದ ಬೆಳೆ ಕೊಚ್ಚಿ ಹೋಗಿದೆ, ನೀರಾವರಿ ಅಧಿಕಾರಿಗಳು ನಾಲೆಯಲ್ಲಿನ ಹೂಳು ತೆರವುಗೊಳಿಸಿ ರೈತರ ಕೃಷಿ ಚಟುವಟಿಕೆಗೆ ಸಹಕಾರ ನೀಡಬೇಕೆಂದು ಕೋರಿದ್ದಾರೆ.
ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ 70 ಅರ್ಜಿ ಸಲ್ಲಿಕೆ
ಹೊಳೆನರಸೀಪುರ ತಾಲೂಕು ಕಚೇರಿ ಆವರಣದಲ್ಲಿ ಆಯೋಜನೆ ಮಾಡಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಕೆಯಾದವು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ ಕಂದಾಯ ಇಲಾಖೆಯ 58, ಪುರಸಭೆಯ 4, ತಾ.ಪಂ.ಯ 2, ಅರಣ್ಯ ಇಲಾಖೆಯ 3, ಅಬಕಾರಿಯ 1, ವಿದ್ಯುತ್ ಇಲಾಖೆಯ 2, ಅಲ್ವಸಂಖ್ಯಾತ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದ್ದು, ಇವರುಗಳಿಗೆ 7 ದಿನದಲ್ಲಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ
ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ ಸದಾ ಮುಂಚೂಣಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ಧಾರ್ಮಿಕ ಕೇಂದ್ರಗಳ ಸ್ವಚ್ಛತೆಯ ಮೂಲಕ ಸಮುದಾಯದಲ್ಲಿ ಶುಚಿತ್ವದ ಜಾಗೃತಿ ಮೂಡಿಸುವ ಗುರಿಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಪ್ರತಿ ವರ್ಷ ಆಗಸ್ಟ್ ತಿಂಗಳ ಸ್ವಾತಂತ್ರ್ಯ ದಿನಾಚರಣೆ ಹಾಗೂ ಜನವರಿ ತಿಂಗಳ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮವನ್ನು ಎಸ್‌ಕೆಡಿಆರ್‌ಡಿಪಿ ನಡೆಸುತ್ತದೆ. ಈ ಬಾರಿ ಜಕ್ಕನಹಳ್ಳಿಯ ಬೈರವೇಶ್ವರ ಈಶ್ವರ ಸ್ವಾಮಿ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಗ್ರಾಮದ ಧಾರ್ಮಿಕ ಮತ್ತು ಸಾಮಾಜಿಕ ಪರಿಸರವನ್ನು ಶುದ್ಧಗೊಳಿಸಲಾಯಿತು.
ಕಾವೇರಿ ನದಿ ಪ್ರವಾಹಕ್ಕೆ ತಂಬಾಕು ಬೆಳೆಗೆ ಹಾನಿ
ಅರಕಲಗೂಡು ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಕಾವೇರಿ ಪ್ರವಾಹ ಬಂದೆರಗಿದ ಪರಿಣಾಮ ತಂಬಾಕು, ಶುಂಠಿ, ಮುಸುಕಿನ ಜೋಳ ಮತ್ತು ಕಾಫಿ ಬೆಳೆಗೆ ಹಾನಿಯಾಗಿ ಅನ್ನದಾತರು ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ. ಕಳೆದ ಬಾರಿ ತಂಬಾಕಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತ ಖುಷಿಯಲ್ಲಿ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸಸಿಮಡಿ ಬೆಳೆಸಿ ನಾಟಿ ಮಾಡಿದ್ದರು. ನಾಟಿ ಸಮಯದಲ್ಲಿ ಉತ್ತಮವಾಗಿ ಬಿದ್ದ ಮಳೆಯಿಂದ ಬೆಳೆ ಬೆಳವಣಿಗೆ ಕಾಣಬೇಕೆನ್ನುವಷ್ಟರಲ್ಲಿ ಅತಿವೃಷ್ಟಿ ಹೊಡೆತಕ್ಕೆ ಸಿಲುಕಿ ಅಪಾರ ಪ್ರಮಾಣದಲ್ಲಿ ಇಳುವರಿ ಕುಂಠಿತಗೊಂಡಿದೆ.
  • < previous
  • 1
  • ...
  • 806
  • 807
  • 808
  • 809
  • 810
  • 811
  • 812
  • 813
  • 814
  • ...
  • 13573
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved