• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು ಸರಬರಾಜು ನೌಕರರ ಬೇಡಿಕೆ ಈಡೇರಿಸದ ಸರ್ಕಾರ
ನೌಕರರ ಬೇಡಿಕೆಗಳಲ್ಲಿ ನೇರ ನೇಮಕಾತಿ, ನೇರ ಪಾವತಿ ಮತ್ತು ಸೇವಾಭದ್ರತೆ ಪ್ರಮುಖವಾಗಿದ್ದು, ಹಲವು ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಇನ್ನೂ ಭರ್ತಿ ಮಾಡಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಇದುವರೆಗೆ ಯಾವಾಗಲೂ ಮುಷ್ಕರ ಕೈಗೊಂಡಿರದ ನೌಕರರು, ಸರ್ಕಾರದ ವಿಳಂಬ ಧೋರಣೆಯಿಂದ ಬೇಸತ್ತು ಈ ಬಾರಿ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮುದಾಯದ ನೀರಿನ ಪೂರೈಕೆ ಎಂಬ ಅತಿ ಮೂಲಭೂತ ಸೇವೆ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ತಕ್ಷಣವೇ ಸರ್ಕಾರ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈಗಾಗಲೇ ೬೦ ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದಾರೆ. ಹಲವಾರು ಬಾರಿ ಹಿಂದಿನ ಸರ್ಕಾರಕ್ಕೆ ಮನವಿ ಮಾಡಿದ್ದೆವು, ಈಗಿರುವ ಪೌರಾಡಳಿತ ಸಚಿವರಲ್ಲಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ ಎಂದರು.
ಸಾಹಿತ್ಯದಲ್ಲಿ ಮಾಡಬೇಕಿರುವ ಕೆಲಸಗಳು ನನಗೆ ಮುಖ್ಯ
‘ರಾಜಕೀಯ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ವೈಯುಕ್ತಿಕ ದೃಷ್ಟಿಯಲ್ಲಿ ಚರ್ಚೆ ಮಾಡುವ ಆಸಕ್ತಿ ನನಗೆ ಯಾವತ್ತೂ ಇಲ್ಲ. ಅಂತಹ ವಿಷಯಕ್ಕೆ ನಾನು ಬರಲ್ಲ. ನಾನು ಸಾಹಿತ್ಯದಲ್ಲಿ ಮಾಡಿರುವ ಹಾಗೂ ಮಾಡಬೇಕಿರುವ ಕೆಲಸಗಳು ಕೆಲಸ ನನಗೆ ಮುಖ್ಯ ಎಂದು ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಪುರಸ್ಕೃತ ಅನುವಾದಕಿ ದೀಪಾ ಭಾಸ್ತಿ ಹೇಳಿದರು. ‘ಮೂಲ ಕರ್ತೃ ಹಾಸನದ ಬಾನು ಮುಷ್ತಾಕ್ ಅವರು. ಬುಕರ್ ಪ್ರಶಸ್ತಿ ಅನುವಾದಿತ ಕೃತಿಗೆ ಕೊಡುವುದು ಎಂದು ನಿಯಮ ಇದೆ. ಅದರಲ್ಲಿ ಅವರು ಬೇರೆ ಬೇರೆ ಮಾಡಲ್ಲ. ಅನುವಾದಕರು ಇದ್ದ ತಕ್ಷಣ ಲೇಖಕರು ಮುಖ್ಯವಲ್ಲ ಅಥವಾ ಲೇಖಕರು ಇದ್ದ ತಕ್ಷಣ ಅನುವಾದಕರು ಮುಖ್ಯವಲ್ಲ ಎನ್ನುವ ರೀತಿ ಆಯ್ಕೆ ಮಂಡಳಿಯವರು ನೋಡುವುದಿಲ್ಲ. ಪ್ರಶಸ್ತಿ ಹಣ ಸಮನಾಗಿ ಹಂಚಿಕೆ ಮಾಡುತ್ತಾರೆ ಎಂದು ಹೇಳಿದರು.
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಮಹೋತ್ಸವ
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಜಯದಶಮಿ ಅಂಗವಾಗಿ ಗುರುವಾರ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು ಹಾಗೂ ಸೆಪ್ಟೆಂಬರ್ 22ರ ಸೋಮವಾರದಿಂದ ಪ್ರಾರಂಭಗೊಂಡಿದ್ದ ಶ್ರೀ ಶರನ್ನವರಾತ್ರಿ ಪೂಜಾ ಮಹೋತ್ಸವ ಗುರುವಾರ ಸಂಜೆ ಶಮೀವೃಕ್ಷದ ಪೂಜಾ ಮಹೋತ್ಸವದೊಂದಿಗೆ ಸಂಪನ್ನವಾಯಿತು. . ಧಾರ್ಮಿಕ ವಿಧಿ ವಿಧಾನಗಳ ಆಚರಣೆಯಂತೆ ಪೂಜಾ ಮಹೋತ್ಸವ ಜರುಗಿದ ನಂತರ ಬನ್ನಿ ವೃಕ್ಷಕ್ಕೆ ಮಲ್ಲಪ್ಪ ಜಯಮ್ಮ ಕುಟುಂಬಸ್ಥರು ಪೂಜೆ ಸಲ್ಲಿಸಿ, ಅರ್ಚಕ ನಾರಾಯಣ ಭಟ್ಟರು ಮಾರ್ಗದರ್ಶನದಂತೆ ವಿನಯ್ ಹಾಗೂ ಶ್ರೀಕಾಂತ್ ಕತ್ತಿಯಿಂದ ಬನ್ನಿ ಛೇದಿಸಿದರು.
ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ವಿಶ್ವಾಸ ಗಳಿಸಲು ಸಾಧ್ಯ
ವಿಜಯದಶಮಿ ಹಬ್ಬದ ಅಂಗವಾಗಿ ಹಳೆ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಯಿಂದ ಏರ್ಪಡಿಸಿದ್ದ ಕಸಬಾ ವಲಯದ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯದಶಮಿ ಹಬ್ಬವು ಸತ್ಯ, ಧರ್ಮ ಮತ್ತು ನ್ಯಾಯದ ಜಯವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ, ನಾವು ಕೂಡಾ ಸಾರ್ವಜನಿಕರಿಗೆ ನ್ಯಾಯಯುತ, ಪಾರದರ್ಶಕ ಹಾಗೂ ಸಮರ್ಥ ಸೇವೆ ನೀಡಲು ಬದ್ಧರಾಗಿರಬೇಕು. ನಾವು ನಮ್ಮ ಕರ್ತವ್ಯಕ್ಕೆ ಸದಾ ನಿಷ್ಠೆಯಿಂದ ಕೆಲಸ ಮಾಡಿದರೆ, ಹಬ್ಬದ ಸಾರ್ಥಕತೆ ಹೆಚ್ಚಾಗುತ್ತದೆ. ಪ್ರತಿ ಹಬ್ಬವು ನಮ್ಮ ಸೇವೆ ಮನೋಭಾವವನ್ನು ಸುಧಾರಿಸಲು ಪ್ರೇರಣೆ ನೀಡಬೇಕು ಎಂದು ಹೇಳಿದರು.
ಪೌರ ಕಾರ್ಮಿಕರಿಗೆ ಸನ್ಮಾನಿಸಿದ ಶಾಸಕ ಬಾಲಕೃಷ್ಣ
ಜನರು ಬೆಚ್ಚಗೆ ಮಲಗಿರುವ ಹೊತ್ತಿನಲ್ಲಿ ತಾವೆದ್ದು ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ಪಟ್ಟಣದ ಗರಿಮೆ ಹಿರಿಮೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಶ್ಲಾಘಿಸಿದರು. ಪೌರ ಕಾರ್ಮಿಕರು ತಮ್ಮ ಕಾಯಕದ ಬಗ್ಗೆ ನಿರಾಸಕ್ತಿ ತೋರದೆ, ಮನಃಪೂರ್ವಕವಾಗಿ, ಶ್ರದ್ಧೆಯಿಂದ ಕಾಯಕ ಮಾಡುವುದು ಹೆಮ್ಮೆಯ ವಿಷಯ. ದೊಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸುವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿವರ್ಷ ಗೌರವಿಸುವುದು ಜನಮೆಚ್ಚುವ ಕಾರ್ಯವಾಗಿದೆ. ನಿಮ್ಮ ಉತ್ತಮ ಆರೋಗ್ಯದಿಂದ ಪಟ್ಟಣದ ಉತ್ತಮ ಆರೋಗ್ಯ ಸಾಧ್ಯ. ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು.
ಎಚ್ಚೆತ್ತ ಜೆಸ್ಕಾಂ: ವಿದ್ಯುತ್‌ ಆವಾಂತರ ದುರಸ್ತಿಗೆ ದಾಪುಗಾಲು
ಜೆಸ್ಕಾಂನ ಔರಾದ್‌ ಉಪ ವಿಭಾಗ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವಾಂತರಗಳ ಕುರಿತು ''ಕನ್ನಡಪ್ರಭ'' ಸರಣಿ ವರದಿಗಳ ಮೂಲಕ ಅಧಿಕಾರಿಗಳಲ್ಲಿ ಚುರುಕು ಮುಟ್ಟಿದಂತಾಗಿದ್ದು ಕಮಲನಗರ ಹಾಗೂ ಔರಾದ್‌ ತಾಲೂಕಿನಾದ್ಯಂತ ವಿದ್ಯುತ್‌ ಕೆಲಸಗಳ ಜೋರು ಹಿಡಿದಿದ್ದಲ್ಲದೆ ಅಧಿಕಾರಿಗಳು, ಸಿಬ್ಬಂದಿ ಅವರವರ ಕೇಂದ್ರ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕೆಂಬ ಆದೇಶ ಹೊರಡಿಸಿದ್ದು, ಜೆಸ್ಕಾಂ ಹೈ ಅಲರ್ಟ್‌ ಆದಂತಾಗಿದೆ.
ಚಿರತೆ ದಾಳಿಗೆ ಎರಡು ಹೋತ ಬಲಿ
ತುರುವೇಕೆರೆ: ತಾಲೂಕಿನಾದ್ಯಂತ ಚಿರತೆ ದಾಳಿ ಮುಂದುವರೆದಿದೆ. ತಾಲೂಕಿನ ಬಾಣಸಂದ್ರ ಗ್ರಾಮದಲ್ಲೇ ಚಿರತೆ ದಾಳಿಗೆ ಎರಡು ಹೋತಗಳು ಬಲಿಯಾಗಿವೆ.
ಮೈಲಾರ ಮಲ್ಲಣ್ಣ ದೇವರ ದರ್ಶನ ಪಡೆದ ಖಂಡ್ರೆ
ತಾಲೂಕಿನ ಖಾನಾಪುರ (ಮೈಲಾರ) ಗ್ರಾಮದಲ್ಲಿ ವಿಜಯದಶಮಿ ನಿಮಿತ್ತ ಗುರುವಾರ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ದೇವರ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನೆರವೇರಿತು.
ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಸಂತೋಷ, ಅಭಿವೃದ್ಧಿ
ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಆ ಮನೆಯಲ್ಲಿ ಸದಾ ಕಾಲ ಸಂತೋಷ, ಸುಖ, ಅಭಿವೃದ್ಧಿ ತುಂಬಿ ತುಳುಕುತ್ತಿರುತ್ತದೆ
ಜಮೀನು ವಿವಾದ: ತಮ್ಮನನ್ನು ಕೊಂದ ಅಣ್ಣ
ತುರುವೇಕೆರೆ: ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಸಹೋದರರ ನಡುವೆ ನಡೆದ ಹೊಡೆದಾಟದಲ್ಲಿ ತಮ್ಮನನ್ನು ಅಣ್ಣ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ಬ್ಯಾಲಹಳ್ಳಿಯಲ್ಲಿ ನಡೆದಿದೆ
  • < previous
  • 1
  • ...
  • 810
  • 811
  • 812
  • 813
  • 814
  • 815
  • 816
  • 817
  • 818
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved