ಮಾನವ ಕಳ್ಳಸಾಗಣೆ ತಡೆಗಟ್ಟುವುದು ಎಲ್ಲರ ಜವಾಬ್ದಾರಿಮಾನವ ಕಳ್ಳಸಾಗಾಣಿಕೆಯಿಂದ ಒಬ್ಬ ವ್ಯಕ್ತಿ ಮಾತ್ರ ಸಮಸ್ಯೆಗೆ ಸಿಲುಕುವುದಿಲ್ಲ. ಆವರ ಕುಟುಂಬವೂ ಸಂಕಷ್ಟಕ್ಕೆ ಸಿಲುಕಲಿದೆ. ಆದ್ದರಿಂದ ಈ ರೀತಿಯ ಸಮಸ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ವರ್ತಿಸಿದಾಗ ಮಾತ್ರ ಒಬ್ಬ ವ್ಯಕ್ತಿ ಹಾಗೂ ಒಂದು ಕುಟುಂಬದಲ್ಲಿ, ಸಮಾಜದಲ್ಲಿ ನೆಮ್ಮದಿ ಸಾಧ್ಯವೆಂದು ಅಪರ ಸಿವಿಲ್ ನ್ಯಾಯಾಧೀಶೆ ಐಶ್ವರ್ಯ ಎಸ್. ಗುಡದಿನ್ನಿ ಅಭಿಪ್ರಾಯಪಟ್ಟರು. ೧೮ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವನ್ನು ಶೋಷಣೆಯ ಉದ್ದೇಶಕ್ಕಾಗಿ ನೇಮಕಾತಿ, ಸಾಗಣೆ, ವರ್ಗಾವಣೆ, ಆಶ್ರಯ ಅಥವಾ ಸ್ವೀಕರಿಸುವುದನ್ನು ಬಲವಂತ, ವಂಚನೆ ಅಥವಾ ವಂಚನೆ ಇಲ್ಲದಿದ್ದರೂ ಸಹ ಯಾವಾಗಲೂ ಕಳ್ಳಸಾಗಣೆ ಎಂದು ಪರಿಗಣಿಸಲಾಗುತ್ತದೆ ಎಂದರು.