ವಿದ್ಯಾರ್ಥಿಗಳು ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು: ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ.ಶೃಂಗೇರಿ , ವಿದ್ಯಾರ್ಥಿ ಜೀವನವೆಂದರೆ ಕೇವಲ ಪಠ್ಯ ಕಲಿಕೆ, ಓದುವಿಕೆ, ಫಲಿತಾಂಶಕ್ಕೆ ಸೀಮಿತವಾಗಿರಬಾರದು. ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಭದ್ರ ಬುನಾದಿಯಾಗುವಂತಿರಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆ ಜೊತೆ ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ ಹೇಳಿದರು.