• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿನಿತ್ಯ ಯೋಗ, ಧ್ಯಾನ, ಪ್ರಾಣಾಯಾಮ ಅಗತ್ಯ: ಡೀಸಿ ಡಾ.ಕುಮಾರ
ಯೋಗಾಭ್ಯಾಸವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕು ಹಸನಾಗುತ್ತದೆ. ಯೋಗ ಅಭ್ಯಾಸದಲ್ಲಿ ಭಾರತ ವಿಶ್ವ ಗುರುವಾಗಿದೆ. ಯೋಗಭ್ಯಾಸದಿಂದ ಮನಸ್ಸಿನ ಚಂಚಲತೆ ಹೋಗಲಾಡಿಸಬಹುದು. ಪ್ರತಿಯೊಬ್ಬರು ಯೋಗಾಭ್ಯಾಸ ಮತ್ತು ಧ್ಯಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡೋಣ.
ಜೆಡಿಎಸ್ - ಬಿಜೆಪಿ ಮೈತ್ರಿ ಬೆಂಬಲಿತರನ್ನು ಗೆಲ್ಲಿಸಿ: ಶಾಸಕ ಎಚ್.ಟಿ.ಮಂಜು
ರಾಜ್ಯ ಸಹಕಾರ ಮಹಾ ಮಂಡಳದ ಪ್ರಾದೇಶಿಕ ನಿರ್ದೇಶಕ ಎಲ್.ಎಲ್.ಮೋಹನ್ ನೇತೃತ್ವದಲ್ಲಿ ತಂಡ ಬಲಿಷ್ಠ ತಂಡವಾಗಿದೆ. ಸಂಸ್ಥೆ ಸಮರ್ಥವಾಗಿ ಮುನ್ನಡೆಸಲು ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಗ್ರಾಮಗಳ 4888 ಷೇರುದಾರ ಮತದಾರು ನಮ್ಮ 8 ಮಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.
ಪಾಂಡವಪುರ: ವಿವಿಧ ಹಳ್ಳಿಗಳಲ್ಲಿ ಬಿಜೆಪಿ ಬೆಂಬಲಿತರಿಂದ ಪ್ರಚಾರ
ಚಿಕ್ಕಮರಳಿ, ಪಟ್ಟಸೋಮನಹಳ್ಳಿ, ನುಗ್ಗಹಳ್ಳಿ, ಕನಗನಮರಡಿ, ತಾಳಶಾಸನ, ತಿಮ್ಮನಕೊಪ್ಪಲು, ಚಿಕ್ಕಬ್ಯಾಡರಹಳ್ಳಿ, ತಾಳಶಾಸನ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳನವೀನ್ ಕುಮಾರ್, ತಾಲೂಕು ಅಧ್ಯಕ್ಚ ಧನಂಜಯ್ ನೇತೃತ್ವದಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.
ರೈತರೇ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಎಸ್.ಎಂ.ರಾಜೇಶ್ವರಿ
ಕೇಂದ್ರದಿಂದ ಹಿಡಿದು ಗ್ರಾಮ ಪಂಚಾಯ್ತಿವರೆವಿಗೂ ಸರ್ಕಾರದ ಸೌಲಭ್ಯವನ್ನು ಬಳಸಿಕೊಳ್ಳುವಂತೆ ತಿಳಿವಳಿಕೆ ನೀಡಲು ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗಿದೆ. ಅವರು ಸಂಘಗಳ ಸ್ಥಾಪನೆ, ತರಬೇತಿ ಸೇರಿದಂತೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದು, ಪ್ರಯೋಜನ ಪಡೆದುಕೊಳ್ಳಬೇಕು.
ಮೀಸಲಾತಿ, ಸೌಲಭ್ಯಗಳಿಗೆ ವಿಶ್ವಕರ್ಮ ಎಂದೇ ನಮೂದಿಸಿ: ಎನ್.ಬಸವರಾಜ್
ವಿಶ್ವಕರ್ಮ ಸಮಾಜದವರು ಗಣತಿ ವೇಳೆ ನಿಮ್ಮ ಮನೆ ಬಳಿಗೆ ಬಂದಾಗ ವಿಶ್ವಕರ್ಮ ಬಂಧುಗಳೆಲ್ಲರೂ ಜಾತಿ ಕಲಂ ನಂ.9 ರಲ್ಲಿ ಸರ್ಕಾರದ ಗೆಜೆಟ್ ನಂ.ಎ-1538, ಜಾತಿ ವಿಶ್ವಕರ್ಮ, ಧರ್ಮ-ಹಿಂದೂ ಎಂದು ಕಡ್ಡಾಯವಾಗಿ ನಮೂದಿಸಬೇಕು.
ಪೌರ ಕಾರ್ಮಿಕರಿಗೆ ನಿವೇಶನ ದೊರಕಿಸಲು ಕ್ರಮ
ಪೌರ ಕಾರ್ಮಿಕ ರವಿಕುಮಾರ್‌ರವರು ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವುದು ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದೆ. ಕೂಡಲೆ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದ ಸಂದರ್ಭದಲ್ಲಿ, ಮುಖ್ಯಾಧಿಕಾರಿ ಪ್ರತಿಕ್ರಿಯಿಸಿ, ನಿವೇಶನ ಹಂಚಿಕೆ ಕುರಿತು ಇದ್ದ ಕೆಲವು ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ ಜಿಲ್ಲಾಧಿಕಾರಿಗಳ ಲಾಗಿನ್‌ಗೆ ಅಪಲೋಡ್ ಮಾಡಲಾಗಿದೆ. ಸದ್ಯದಲ್ಲೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ನಿವೇಶನ ಹಂಚಿಕೆ ಕುರಿತು ಮನವಿ ಮಾಡಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳು ಮನವಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.
ಪತ್ರಕರ್ತರ ಸಂಘದದಲ್ಲಿ ನಾಳೆ ಡಿವಿಜಿ ಸಭಾಂಗಣ ಉದ್ಘಾಟನೆ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಡಿವಿಜಿ ಸಭಾಂಗಣದ ಉದ್ಘಾಟನೆಯು ಸೆಪ್ಟಂಬರ್ ೩೦ರ ಮಂಗಳವಾರ ಶಾಸಕ ಎಚ್.ಪಿ. ಸ್ವರೂಪ್ ಅವರು ನೆರವೇರಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ. ಎಚ್. ವೇಣುಕುಮಾರ್ ತಿಳಿಸಿದರು. ಈ ಸಮಾರಂಭದ ಕಾರ್ಯಕ್ರಮಕ್ಕೆ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಪತ್ರಿಕೆಯ ಎಲ್ಲಾ ಸಂಪಾದಕರು, ಎಲ್ಲಾ ವರದಿಗಾರರು, ಛಾಯಾಗ್ರಹಕರು, ಸಮಸ್ತ ಪತ್ರಕರ್ತರು ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಅರಣ್ಯ ಇಲಾಖೆ ಒತ್ತುವರಿ ಜಾಗ ತೆರವು ಆದೇಶಕ್ಕೆ ಸ್ವಾಗತ
ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಒತ್ತುವರಿ ಜಾಗಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದು ಅರಣ್ಯ ರಕ್ಷಣೆಗೆ ಒಳ್ಳೆಯ ಹೆಜ್ಜೆಯಾದರೂ, ಕಾನೂನು ಬದ್ಧವಾಗಿ ಸಣ್ಣ ಹಿಡುವಳಿದಾರ ರೈತರಿಗೆ ಮಂಜೂರಾಗಿರುವ ಜಾಗವನ್ನು ಅವರಿಗೆ ಬಿಟ್ಟುಕೊಡಬೇಕು. ಅಕ್ರಮವಾಗಿ ಕಬಳಿಸಿದ ಜಾಗವನ್ನಷ್ಟೇ ತೆರವು ಮಾಡಬೇಕು ಎಂದು ಒತ್ತಾಯಿಸಿದರು. ಹಾಸನ ಜಿಲ್ಲೆಯಲ್ಲಿ ಒಟ್ಟು ೨,೧೧,೭೬೩ ಎಕರೆ ಅರಣ್ಯ ಪ್ರದೇಶವಿದ್ದು, ಅದರಲ್ಲೂ ಸುಮಾರು ೩೦,೦೦೦ ಎಕರೆ ಪ್ರದೇಶ (ಶೇಕಡಾ ೧೫ರಷ್ಟು) ಒತ್ತುವರಿಯಾಗಿದ್ದು, ಕೆಲವನ್ನು ಸರ್ಕಾರವೇ ರೈತರಿಗೆ ಮಂಜೂರು ಮಾಡಿದೆ. "ಇವುಗಳಲ್ಲಿ ಮಂಜೂರಾದ ಜಾಗಗಳನ್ನು ಹೊರತುಪಡಿಸಿ ಉಳಿದ ಅಕ್ರಮ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಬೇಕು " ಎಂದು ಶಿವರಾಂ ಅಭಿಪ್ರಾಯಪಟ್ಟರು.
ಶರನ್ನವರಾತ್ರಿಯ ಪ್ರಯುಕ್ತ ಲಲಿತ ಸಹಸ್ರನಾಮ ಪಾರಾಯಣ
ಶ್ರೀ ಶಂಕರ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಠದಲ್ಲಿ ನಡಡದ ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಲಲಿತಾ ಹೋಮದಲ್ಲಿ ಆಶೀರ್ವಚನ ನೀಡಿ ವೇದಬ್ರಹ್ಮ ಕೆ. ಆರ್. ಮಂಜುನಾಥ್ ಮಾತನಾಡಿ, ಶರನ್ನವರಾತ್ರಿ ದೇವಿ ಆರಾಧನೆಯ ಪ್ರಯುಕ್ತ. ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಲಲಿತಾ ಹೋಮವು ಭಕ್ತರ ಮನಸ್ಸಿಗೆ ಶಾಂತಿ ಹಾಗೂ ಸಮಾಜಕ್ಕೆ ಸೌಹಾರ್ದ ತರುತ್ತದೆ. ಶಕ್ತಿಯ ಆರಾಧನೆ ಮಾನವನ ಆಂತರಿಕ ಶಕ್ತಿಯನ್ನು ಜಾಗೃತಗೊಳಿಸುತ್ತದೆ ಹಾಗು ಪ್ರತಿದಿನ ಹೋಮಗಳು ನಡೆಸಲಾಗುತ್ತದೆ. ದೇಶವು ಶಾಂತಿ, ನೆಮ್ಮದಿಯಿಂದ ಇದ್ದು, ನಾಡು ಮಳೆ, ಬೆಳೆ ಬಂದು ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿ ಹೋಮ ನಡೆಸಿದ್ದೇವೆ ಎಂದು ತಿಳಿಸಿದರು.
ತೇಜಸ್ವಿ ಕೊಡುಗೆಗಳು ಇಂದಿನವರಿಗೆ ಮಾರ್ಗದರ್ಶಿ
ಕನ್ನಡದ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬರಾಗಿದ್ದ ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡಕ್ಕೆ ನೀಡಿದ ಕೊಡುಗೆ ಅಪಾರವಾದುದು. ಅವರ ಬರಹ, ಶ್ರದ್ಧೆ, ಸರಳ ಬದುಕು ಇಂದಿನವರಿಗೆ ಮಾರ್ಗದರ್ಶಿ ಆಗಿದೆ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಂ.ಮಾದಯ್ಯ ತಿಳಿಸಿದರು. ತೇಜಸ್ವಿ ಯಾವುದೇ ಪಂಥಕ್ಕೆ ಸಿಲುಕದ ಅಪರೂಪದ ಲೇಖಕ. ಸಾಮಾನ್ಯ ಪಾತ್ರಗಳ ಮೂಲಕ ವೈಚಾರಿಕ ಸಂದೇಶವನ್ನು ಸಾರಿದವರು. ಮಂತ್ರ ಮಾಂಗಲ್ಯದ ಮೂಲಕ ಸರಳ ಮದುವೆಯ ಪರಂಪರೆಗೆ ನಾಂದಿ ಹಾಡಿದವರು. ಆ ಕಾಲದ ಎಲ್ಲ ಹೋರಾಟಗಳಿಗೆ ಪ್ರೇರಣೆ ಆಗಿದ್ದರು ಎಂದು ಸ್ಮರಿಸಿದರು.
  • < previous
  • 1
  • ...
  • 934
  • 935
  • 936
  • 937
  • 938
  • 939
  • 940
  • 941
  • 942
  • ...
  • 14739
  • next >
Top Stories
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved