ಅಖಿಲ ಕೊಡವ ಸಮಾಜದ ಕಾರ್ಯಕಾರಿ ಮಂಡಳಿಯ ಮಹಾಸಭೆಯಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷರಾಗಿ ಪರದಂಡ ಸುಬ್ರಮಣಿ ಕಾವೇರಪ್ಪ ಪುನಾರಾಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಅಖಿಲ ಕೊಡವ ಸಮಾಜದ ಕಾರ್ಯಕಾರಿ ಮಂಡಳಿಯ ಮಹಾಸಭೆಯಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷರಾಗಿ ಪರದಂಡ ಸುಬ್ರಮಣಿ ಕಾವೇರಪ್ಪ ಪುನರಾಯ್ಕೆ ಮಾಡಲಾಯಿತು.

ಅಖಿಲ ಕೊಡವ ಸಮಾಜದ ವಿಶೇಷ ಮಹಾಸಭೆ ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಶನಿವಾರ ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ದೇಶತಕ್ಕರೆಲ್ಲ ಸರ್ವಾನುಮತದಿಂದ, ಪಾಡಿ ಶ್ರೀ ಇಗ್ಗುತಪ್ಪ ಭಕ್ತ ಜನ ಸಂಘದ ಅಧ್ಯಕ್ಷರೂ ಆದ ಪರದಂಡ ಸುಬ್ರಮಣಿ ಕಾವೇರಪ್ಪ ಅವರನ್ನು ಮುಂದಿನ 3 ವರ್ಷಗಳ ಅವಧಿಗೆ ಆಯ್ಕೆ ಮಾಡಿದರು.ಸಭೆಯಲ್ಲಿ ಅಖಿಲ ಕೊಡವ ಸಮಾಜದ ಕಾರ್ಯಕಾರಿ ಮಂಡಳಿಯ ಸದಸ್ಯರಲ್ಲದೆ ದೇಶ ತಕ್ಕರಾದ ಕಳ್ಳಂಗಡ ಪೂವಯ್ಯ, ಬೊಳ್ಳೆರ ವಿನಯ ಅಪ್ಪಯ್ಯ, ಪೋರೇರ ಬಿದ್ದಪ್ಪ, ಪರುವಂಡ ಪೊನ್ನಪ್ಪ ಮತ್ತು ಮಾತಂಡ ಧೀರಜ್ ಹಾಗೂ ಪಾಂಡಿರ ಕುಟುಂಬಸ್ಥರು ಉಪಸ್ಥಿತರಿದ್ದರು.ನೂತನ ಆಡಳಿತ ಮಂಡಳಿ ಮತ್ತು ಕೇಂದ್ರೀಯ ಸಮಿತಿ ಸದಸ್ಯರನ್ನು ಮುಂದಿನ ದಿನಗಳಲ್ಲಿ ಎಲ್ಲಾ ನಾಡು ತಕ್ಕರ ಸಭೆ ಕರೆದು ಆಯ್ಕೆ ಮಾಡುವ ಜವಾಬ್ದಾರಿ ಕೂಡ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಕಾವೇರಪ್ಪ ಅವರಿಗೆ ವಹಿಸಲಾಯಿತು.