ಸಾರಾಂಶ
ವಿದ್ಯಾರ್ಥಿಗಳಲ್ಲಿ ಕ್ರೀಡಾ ಚಟುವಟಿಕೆಗಳ ಅತೀ ಮಹತ್ವವಾಗಿದೆ. ಶಾರೀರಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವುದು ಅತೀ ಅವಶ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ವಿದ್ಯಾರ್ಥಿಗಳಲ್ಲಿ ಕ್ರೀಡಾ ಚಟುವಟಿಕೆಗಳ ಅತೀ ಮಹತ್ವವಾಗಿದೆ. ಶಾರೀರಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವುದು ಅತೀ ಅವಶ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ನಗರದ ಟಕ್ಕೆ ರಸ್ತೆಯಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು, ಸಾಮೂಹಿಕ ಕವಾಯತ್ನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ ಹಾಗೂ ಪಾಲಕರು ಭಾಗವಹಿಸಿ ಶಾಲಾ ಕ್ರೀಡಾಂಗಣದಲ್ಲಿ ಕ್ರೀಡಾ ಹಬ್ಬವನ್ನು ಆಚರಿಸಿದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿಜೇತ ಮಕ್ಕಳಿಗೆ ಜಿಲ್ಲಾಧಿಕಾರಿಗಳು ಬಹುಮಾನ ವಿತರಿಸಿದರು. ಶಾಲೆಯ ಇಂಗ್ಲಿಷ್ ವಿಷಯ ಶಿಕ್ಷಕರಾದ ಅನಿತಾ ಜೋಸೆಫ್ ನಿರೂಪಿಸಿದರು. ಹಿರಿಯ ಉಪನ್ಯಾಕರಾದ ಅನಾಮಿಕ ಕುಮಾರಿ ವಂದಿಸಿದರು. ಸಿಮ್ರಾನ್ ಕ್ರೀಡಾ ವರದಿ ವಾಚನ ಮಾಡಿದರು. ಜಿಲ್ಲೆಯ ಅಂಚೆ ಇಲಾಖೆಯ ಜಿಲ್ಲಾ ಅಧೀಕ್ಷಕ ಕುಮಾರಸ್ವಾಮಿ, ಶಾಲೆಯ ಪ್ರಾಚಾರ್ಯರಾದ ಜುನ್ನಾ ರಾಮ, ಶಾಲಾ ಶಿಕ್ಷಕರಾದ ಸೀಮಾ, ಶಂಕರ ಶಾಸ್ತ್ರಿ, ಸೌರಭ, ರಮೇಶ ಚವಾಣ, ಸುವರ್ಣಾ ಸೀಳಿನ್, ಸಾಯಿತೇಜಸ್ವಿನಿ, ದಾದಾಸೋ, ವಿಠ್ಠಲ ಚಟ್ಟರಕಿ, ಸಂತೋಷ ಹಲವಾಯಿ ಹಾಗೂ ಸೋಮೇಶ್ ಅಲಗುಂಡಗಿ ಉಪಸ್ಥಿತರಿದ್ದರು.