ಕ್ರೀಡೆಯಿಂದ ಜೀವನದಲ್ಲಿ ಉತ್ಸಾಹ

| Published : Sep 13 2024, 01:45 AM IST

ಸಾರಾಂಶ

ಪ್ರತಿಯೊಬ್ಬ ಮನುಷ್ಯನ ಶರೀರಕ್ಕೂ ಮುಪ್ಪಾವಸ್ಥೆ ಬರುತ್ತದೆ. ಆದರೆ ಮನಸ್ಸಿಗೆ ಅಲ್ಲ. ಇದನ್ನರಿತು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ಸಾಹ ಜೀವನ ಸಾಗಿಸಲು ಸಾಧ್ಯವೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರತಿಯೊಬ್ಬ ಮನುಷ್ಯನ ಶರೀರಕ್ಕೂ ಮುಪ್ಪಾವಸ್ಥೆ ಬರುತ್ತದೆ. ಆದರೆ ಮನಸ್ಸಿಗೆ ಅಲ್ಲ. ಇದನ್ನರಿತು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ಸಾಹ ಜೀವನ ಸಾಗಿಸಲು ಸಾಧ್ಯವೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜನ ಕಲ್ಯಾಣ ಹಾಗೂ ಆರೋಗ್ಯ ವೃದ್ಧಿಗಾಗಿ ಸರಕಾರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹಿರಿಯರಾಗಲಿ, ಕಿರಿಯರಾಗಲಿ ಕ್ರೀಡೆಯಲ್ಲಿ ಭಾಗವಹಿಸಿ ದೀರ್ಘಾಯುಷಿಗಳಾಗಿ ಆರೋಗ್ಯವಂತ ಜೀವನ ನಡೆಸಬೇಕು ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾಧಿಕಾರಿ ಕೆ.ಮಹಾಂತೇಶ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ ಸಿದ್ದಲಿಂಗಪ್ಪ ಗೋಳದ ಸೇರಿದಂತೆ ಇತರರು ಉಪಸ್ಥಿತರಿದ್ದರು.