ಸಾರಾಂಶ
- ಚಿಕ್ಕಮಗಳೂರಿನ ವಾರ್ಡ್ ನಂಬರ್ 26 ಮತ್ತು 27 ರಲ್ಲಿ ಜನಸಂಪರ್ಕ ಸಭ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.ನಗರಸಭೆಯಿಂದ ನಗರದ ವಾರ್ಡ್ ನಂ. 26, 27 ರಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜನಸಂಪರ್ಕ ಸಭೆಯಲ್ಲಿ ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ, ಸಣ್ಣ ನೀರಾವರಿ ಇಲಾಖೆ, ಮೆಸ್ಕಾಂ, ಆಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಗೆ ಬರುವ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಆಗಮಿಸಿದ್ದು ಇದರ ಅನುಕೂಲ ಪಡೆಯಬೇಕು ಎಂದರು.
ಸೋಮೇಶ್ವರ ದೇವಸ್ಥಾನದ ಅಭಿವೃದ್ಧಿಗೆ ₹20 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಇಂದು ಪೂಜೆ ಸಲ್ಲಿಸ ಲಾಗಿದೆ. ಸಮುದಾಯ ಭವನ ಮುಂದುವರಿದ ಕಾಮಗಾರಿಗೆ ₹10 ಲಕ್ಷ ಮಂಜೂರಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದ ಅವರು, ವಾರ್ಡಿನ ಜನತೆ ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಮಾತನಾಡಿ, ನಗರದಲ್ಲಿ ಯುಜಿಡಿ ಮತ್ತು ಅಮೃತ್ ಯೋಜನೆ ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಮಸ್ಯೆಗಳ ಬಗ್ಗೆ ವೀಕ್ಷಣೆ ಮಾಡಿ ಚಾನಲ್ ಸ್ವಚ್ಛತೆಗೊಳಿಸಲು ಕ್ರಮ ವಹಿಸಬೇಕು. ಈಗಾಗಲೇ ನಗರದಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದೆ. ವಾರ್ಡಿನ ನಾಗರಿಕರು ಕಸವನ್ನು ಗಂಟೆ ಗಾಡಿಗೆ ಹಾಕುವ ಮೂಲಕ ಸ್ವಚ್ಛತೆ ಕಾಪಾಡಲು ನಗರಸಭೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ನಗರಸಭೆ ಸದಸ್ಯ ಟಿ.ರಾಜಶೇಖರ್ ಮಾತನಾಡಿ, ಯುಜಿಡಿ ಅಮೃತ್ ಯೋಜನೆ, ಸಣ್ಣ ನೀರಾವರಿ ಕಾಲುವೆ ಈ ಮೂರು ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ಎಂದು ಹೇಳಿದ ಅವರು, ದೀಪದ ಕೆಳಗೆ ಕತ್ತಲು ಎಂಬಂತೆ ಕೆಲವು ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸರಬರಾಜು ಕಡಿಮೆಯಾಗಿದೆ. ಈ ಸಂಬಂಧ ನಾಗರಿಕರು ದಿನನಿತ್ಯ ನನ್ನ ಗಮನಕ್ಕೆ ತರುತ್ತಿ ದ್ದಾರೆ. ಸಮುದಾಯ ಭವನ ಅಭಿವೃದ್ಧಿಗೆ ಶ್ರಮಿಸಿದ್ದು, ಶಾಸಕರು ₹10 ಲಕ್ಷ ಅನುದಾನ ನೀಡುವ ಮೂಲಕ ಅಭಿವೃದ್ಧಿ ಯಾದರೆ ನಾಗರಿಕರಿಗೆ ಅನುಕೂಲವಾಗಲಿದೆ. ನಗರಸಭೆ ಅಧಿಕಾರಿಗಳು ವಾರ್ಡ್ ವಿಂಗಡಣೆ ಮಾಡುವಾಗ ಗೊಂದಲ ಉಂಟುಮಾಡದೆ ಸರ್ವೆ ನಕಾಶೆ ಆಧರಿಸಿ ವಿಂಗಡಣೆ ಮಾಡಬೇಕು. ಇದರಿಂದ 27ನೇ ವಾರ್ಡಿನ ಮತದಾರರು 26ಕ್ಕೆ ಸೇರ್ಪಡೆಯಾಗಿದ್ದಾರೆಂದು ಹೇಳಿದರು.ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಅನು ಮಧುಕರ್, ಮಾಜಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಪೌರಾಯುಕ್ತ ಬಿ.ಸಿ. ಬಸವರಾಜ್, ಸದಸ್ಯ ಶಾದಬ್ ಆಲಂಖಾನ್ ಉಪಸ್ಥಿತರಿದ್ದರು. 14 ಕೆಸಿಕೆಎಂ 2ಚಿಕ್ಕಮಗಳೂರು ನಗರದ ವಾರ್ಡ್ ನಂಬರ್ 26 ಮತ್ತು 27 ರಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ವೀಕ್ಷಿಸಿದರು. ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್, ಉಪಾಧ್ಯಕ್ಷೆ ಅನು ಮಧುಕರ್, ಸದಸ್ಯ ಟಿ. ರಾಜಶೇಖರ್, ಪೌರಾಯುಕ್ತ ಬಸವರಾಜ್ ಇದ್ದರು.