ಪೆರಾಜೆ ಪ್ರಾ. ಕೃ. ಪ. ಸ. ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

| Published : Aug 18 2025, 12:00 AM IST

ಸಾರಾಂಶ

ಪೆರಾಜೆ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಘದ ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಆವರು ಧ್ವಜಾರೋಹಣವನ್ನು ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಅಶೋಕ ಪೆರುಮುಂಡ, ನಿರ್ದೇಶಕರುಗಳಾದ ಜಯರಾಮ ಎನ್ ಬಿ , ಧನಂಜಯ ಕೆ ವಿ , ಸೀತಾರಾಮ ಕದಿಕಡ್ಕ, ಪುಷ್ಪಾವತಿ ಯಾಪಾರೆ, ದೀನರಾಜ್ ಡಿ ಸಿ, ಜಯರಾಮ ಪಿ ಟಿ, ಪ್ರದೀಪ ಕೆ ಯಂ, ಶೇಷಪ್ಪ ಎನ್ ವಿ, ಮತ್ತು ಹಿರಿಯ ಸಹಕಾರಿಗಳಾದ ತೀರ್ಥರಾಮ ಹೊದ್ದೆಟ್ಟಿ, ಪದ್ಮಯ್ಯ ಕೆ ಎಸ್ ಹಾಗು ಸಂಘದ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೆಚ್ ಕೆ ಸ್ವಾಗತಿಸಿದರು. ಸಿಬ್ಬಂದಿ ರವಿಪ್ರಕಾಶ್ ಸಿ ಪಿ ನಿರೂಪಿಸಿದ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿಯವರು ವಂದಿಸಿದರು.