ರಾಯಚೂರು: ಆತ್ಮಹತ್ಯೆಗೆಂದು ಮೊಬೈಲ್ ಟವರ್ ಏರಿದ್ದ ವ್ಯಕ್ತಿ ರಕ್ಷಣೆ
1 Min read
Author : KannadaprabhaNewsNetwork
Published : Oct 20 2023, 01:00 AM IST
Share this Article
FB
TW
Linkdin
Whatsapp
19ಕೆಪಿಎಂಎನ್ವಿ01ಮತ್ತು02: | Kannada Prabha
Image Credit: KP
ಕೌಟುಂಬಿಕ ಕಲಹದಿಂದ ಬೇಸತ್ತು ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮನವೊಲಿಸಿ ಕೆಳಗಿಳಿಸಿದ ಪ್ರಸಂಗ ಗುರುವಾರ ನಡೆಯಿತು.
ಮಾನ್ವಿ: ಕೌಟುಂಬಿಕ ಕಲಹದಿಂದ ಬೇಸತ್ತು ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮನವೊಲಿಸಿ ಕೆಳಗಿಳಿಸಿದ ಪ್ರಸಂಗ ಗುರುವಾರ ನಡೆಯಿತು. ಪಟ್ಟಣದ ಕುಂಬಾರ ಓಣಿಯ ಯುವಕ ಅಮ್ಜದ್ ಖಾನ್ (35) ಟವರ್ ಏರಿದ ವ್ಯಕ್ತಿಯಾಗಿದ್ದಾನೆ. ಹಲವು ದಿನಗಳಿಂದ ಕೌಟಂಬಿಕ ಕಲಹ ಹಾಗೂ ಕೆಲ ವ್ಯಕ್ತಿಗಳಿಂದ ವೈಯಕ್ತಿಕ ನಿಂದನೆಗಳನ್ನು ಎದುರಿಸುತ್ತಿದ್ದ ಅಮ್ಜದ್ ಖಾನ್ ಗುರುವಾರ ಬೆಳಗ್ಗೆ ಮೊಬೈಲ್ ಟವರ್ ಹತ್ತಿದ್ದ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದನು. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಅಗ್ನಿಶಾಮಕ ದಳ, ಪುರಸಭೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸತತ ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ, ಅಮ್ಜದ್ ಖಾನ್ ಮನವೊಲಿಸಿ ಕೆಳಗಿಳಿಸುವಲ್ಲಿ ಯಶಸ್ಸಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪಿಐ ವೀರಭದ್ರಯ್ಯ ಸ್ವಾಮಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.