ಸಾರಾಂಶ
ರಾಜ್ಯದಲ್ಲಿ ಸುಮಾರು 18 ರಿಂದ 25 ವಯಸ್ಸಿನ ಪದವಿ ಪೂರ್ವ ಹಾಗೂ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ತರಬೇತಿಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಸುಮಾರು ಹತ್ತು ಸಾವಿರ ರುಪಾಯಿಗಳ ಅನುದಾನ ನೀಡುತ್ತಿದ್ದು, ಈಗಾಗಲೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ರಾಜ್ಯ ಸಂಸ್ಥೆ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ನುಡಿದರು.
ಚಿಕ್ಕಮಗಳೂರು: ರಾಜ್ಯದಲ್ಲಿ ಸುಮಾರು 18 ರಿಂದ 25 ವಯಸ್ಸಿನ ಪದವಿ ಪೂರ್ವ ಹಾಗೂ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ತರಬೇತಿಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಸುಮಾರು ಹತ್ತು ಸಾವಿರ ರುಪಾಯಿಗಳ ಅನುದಾನ ನೀಡುತ್ತಿದ್ದು, ಈಗಾಗಲೇ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ರಾಜ್ಯ ಸಂಸ್ಥೆ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ನುಡಿದರು.ನಗರದ ಸ್ಕೌಟ್ ಗೈಡ್ಸ್ ಸಭಾಂಗಣದಲ್ಲಿ, ಕುವೆಂಪು ವಿಶ್ವವಿದ್ಯಾಲಯ ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳಿಗಾಗಿ ಆಯೋಜಿಲಾಗಿದ್ದ ಒಂದು ದಿನದ ಸಾಮಾನ್ಯ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕರಾವಳಿ, ಬಯಲುಸೀಮೆ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅತಿವೃಷ್ಠಿ, ಸುನಾಮಿ, ಪ್ರವಾಹ, ಬರಗಾಲ ಮತ್ತಿತರ ಪ್ರಾಕೃತಿಕ ವಿಕೋಪಗಳು ಪದೇ ಪದೇ ಕಾಣಿಸುವುದು ಸರ್ವೇ ಸಾಮಾನ್ಯ. ಸ್ಥಳೀಯ ಯುವಕರು ಕೂಡಲೇ ಕಾರ್ಯಪ್ರವೃತ್ತರಾಗಿ ಸ್ಥಳೀಯ ಸಮಸ್ಯೆಗಳಿಗೆ ಅವರುಗಳೇ ಕೂಡಲೇ ಸ್ಪಂದಿಸಿ ಪರಿಹಾರ ಕಾರ್ಯದಲ್ಲಿ ಆಡಳಿತದೊಂದಿಗೆ ಕೈ ಜೋಡಿಸಿ ಕೆಲಸ ಮಾಡುವ ಕಾರ್ಯಕ್ಷಮತೆಯಲ್ಲಿ ಅವರನ್ನು ಸಜ್ಜಾಗಿಸಲು ತರಬೇತಿ ನೀಡಲಾಗುತ್ತಿದೆ ಎಂದರು.ಸೇವೆ ಮತ್ತು ವ್ಯಕ್ತಿತ್ವ ನಿರ್ಮಾಣ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಮುಖ್ಯ ಉದ್ದೇಶ. ಸರ್ಕಾರವು ಎಲ್ಲಾ ಪದವಿಪೂರ್ವ ಹಾಗೂ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ರೊವರ್ಸ್ ಮತ್ತು ರೇಂಜರ್ಸ್ ಘಟಕವನ್ನು ಸ್ಥಾಪಿಸಲು ಆದೇಶಿಸಿದ್ದು, ಸದಾ ಸಿದ್ಧರಾಗಿರುವ ಒಂದು ಸೇವಾಪಡೆಯನ್ನು ನಿರ್ಮಿಸಲು ಕಾಲೇಜುಗಳ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉತ್ಸುಕ ಪ್ರಾಧ್ಯಾಪಕರುಗಳು ಈ ರಾಷ್ಟ್ರೀಯ ಅಭಿಯಾನದಲ್ಲಿ ಕೈ ಜೋಡಿಸಬೇಕೆಂದು ಕರೆಯಿತ್ತರು.ಪದವಿ ಪೂರ್ವ ಕಾಲೇಜಿನ ಉಪನಿರ್ದೇಶಕರಾದ ಮಂಜುಳ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 90 ಪದವಿ ಕಾಲೇಜುಗಳಿದ್ದು, ಎಲ್ಲರೂ ಕಡ್ಡಾಯವಾಗಿ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳನ್ನು ಪ್ರಾರಂಭಿಸಬೇಕು ಮತ್ತು ಈ ದಿಸೆಯಲ್ಲಿ ಸಂಬಂಧಪಟ್ಟ ಶಾಲೆಯ ಪ್ರಾಂಶುಪಾಲರುಗಳು ಆಸಕ್ತಿವಹಿಸಿ ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.ಕುವೆಂಪು ವಿಶ್ವವಿದ್ಯಾನಿಲಯದ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ನೋಡಲ್ ಅಧಿಕಾರಿ ರವೀಂದ್ರಗೌಡ ಮಾತನಾಡಿ, ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಬಿ.ಎಡ್ ಕಾಲೇಜುಗಳು ಸೇರಿದಂತೆ ಎಲ್ಲಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು ಪ್ರಾರಂಭಿಸುವ ಮೂಲಕ ಸಮಾಜಸೇವೆ, ಯುವಕರ ಜವಾಬ್ದಾರಿ, ಪರಿಸರ ಪ್ರಜ್ಞೆ ಮತ್ತು ಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಕ್ಷರಿ ಮಾತನಾಡಿ, ಯುವಕರು ದುಷ್ಚಟಗಳು ಹಾಗೂ ಆಕರ್ಷಣೆಗೆ ಒಳಗಾಗದೆ ಸಮಾಜ ಕಟ್ಟುವ ಕೆಲಸ ಮಾಡಬೇಕಿದೆ. ದೇಶದಲ್ಲಿ ಶೇ.60ರಷ್ಟು ಯುವಕರಿದ್ದು ಅವರ ನಿರ್ಣಾಯಕ ವಯೋಮಾನದಲ್ಲಿರುವ ಜವಾಬ್ದಾರಿ ನಮ್ಮ ಮೇಲಿದ್ದು ಕಾಲೇಜಿನ ಪ್ರಾಧ್ಯಾಪಕರು ಸಿಕ್ಕಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ನಂತರ ನಡೆದ ರೋವರ್ಸ್ ಮತ್ತು ರೇಂಜರ್ಸ್ ಮಾಹಿತಿ ಶಿಬಿರದಲ್ಲಿ ತರಬೇತುದಾರರಾಗಿ ನೀಲಕಂಠಚಾರ್, ಸಂದ್ಯಾರಾಣಿ, ಎಂ.ಎನ್.ಷಡಕ್ಷರಿ ಮತ್ತಿತರರು ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತೆ ಡಿ.ಎಸ್.ಮಮತ, ಸ್ಕೌಟ್ ಆಯುಕ್ತ ಫಣಿರಾಜ್, ಜಿಲ್ಲಾ ಸಹಾಯಕ ಆಯುಕ್ತ ಡಾ.ಜಿ.ಎಂ.ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))