ಸ್ಕೌಟ್ಸ್ ಮತ್ತು ಕ್ಲಬ್ ಮಾಸ್ಟರ್, ಗೈಡ್ ಕ್ಯಾಪ್ಟನ್, ಪ್ಲ್ಯಾಕ್ ಲೀಡರ್ ಸಮಾವೇಶ

| Published : Feb 11 2024, 01:48 AM IST / Updated: Feb 11 2024, 01:49 AM IST

ಸ್ಕೌಟ್ಸ್ ಮತ್ತು ಕ್ಲಬ್ ಮಾಸ್ಟರ್, ಗೈಡ್ ಕ್ಯಾಪ್ಟನ್, ಪ್ಲ್ಯಾಕ್ ಲೀಡರ್ ಸಮಾವೇಶ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳು ನಾಲ್ಕು ಗೋಡೆಗಳ ಮಧ್ಯೆ ವಿಧ್ಯೆ ಕಲಿಯುವುದರ ಜತೆಗೆ ನಿಸರ್ಗದ ಜೊತೆಗೆ ಸ್ಕೌಟ್ಸ್ ಚಟುವಟಿಕೆಗಳು ತಾಲೂಕಿನಲ್ಲಿ ಹೆಚ್ಚಾಗಿ ನಡೆಯಬೇಕಿದೆ ಎಂದು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಇಂಡಿ

ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಶಿಸ್ತು ಮಹತ್ವದ್ದಾಗಿದೆ ಎಂದು ಜಿಲ್ಲಾ ಪ್ರಭಾರಿ ದೈಹಿಕ ಶಿಕ್ಷಣ ಪರಿವೀಕ್ಷಕ ಎ ಎಸ್ ಲಾಳಸೇರಿ ತಿಳಿಸಿದರು.

ಪಟ್ಟಣದ ಗುರುಭವನದಲ್ಲಿ ಭಾರತ ಸ್ಕೌಟ್ಸ್, ಗೈಡ್ಸ್ ಸ್ಥಳೀಯ ಸಂಸ್ಥೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹಮ್ಮಿಕೊಂಡ ಸ್ಕೌಟ್ಸ್ ಮತ್ತು ಕ್ಲಬ್ ಮಾಸ್ಟರ್,ಗೈಡ್ ಕ್ಯಾಪ್ಟನ್, ಪ್ಲ್ಯಾಕ್ ಲೀಡರ್ ತಾಲೂಕಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ನಾಲ್ಕು ಗೋಡೆಗಳ ಮಧ್ಯೆ ವಿಧ್ಯೆ ಕಲಿಯುವುದರ ಜತೆಗೆ ನಿಸರ್ಗದ ಜೊತೆಗೆ ಸ್ಕೌಟ್ಸ್ ಚಟುವಟಿಕೆಗಳು ತಾಲೂಕಿನಲ್ಲಿ ಹೆಚ್ಚಾಗಿ ನಡೆಯಬೇಕಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಪಿ ಎಸ್ ಕುಂಬಾರ ಮಾತನಾಡಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇರ್ಪಡೆಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಕಲಿಕಾ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲ ಶಾಲಾ ಮಕ್ಕಳು ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಸೇರ್ಪಡೆಯಾಗುವಂತೆ ಸಲಹೆ ನೀಡಿದರು.

ಸ್ಕೌಟ್ಸ್ ಮಾಸ್ಟರ್ ಸಂತೋಷ ಬಂಡೆ,ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವು ಬೆಳೆಯುತ್ತದೆ. ಪರಿಸರ ಉಳಿಸಿ-ಬೆಳೆಸುವ ಮನೋಭಾವವನ್ನು ಮಕ್ಕಳಲ್ಲಿ ಹೆಚ್ಚಿಸಿ, ರಾಷ್ಟ್ರಪ್ರೇಮ ಪರಿಕಲ್ಪನೆಯನ್ನು ಗಟ್ಟಿಗೊಳಿಸಬೇಕು ಎಂದರು.

ತಾಲೂಕ ಕಾರ್ಯದರ್ಶಿ ಶಹಾಜಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್ ವಿ ಹರಳಯ್ಯ, ಖಜಾಂಚಿ ಬಸವರಾಜ ಗೋರನಾಳ,ಸ್ಕೌಟ್ಸ್ ಮಾಸ್ಟರ್ ಗಳಾದ ವೈ ಜಿ ಬಿರಾದಾರ, ದತ್ತಾತ್ರೇಯ ಕೋಳಾರಿ,ಸಂಗಮೇಶ ಬಂಡೆ,ಎಸ್ ಎಸ್ ಧೂಳಖೇಡ, ಸಿ.ಎಸ್.ಮೇತ್ರಿ ಹಾಗೂ ಗೈಡ್ ಕ್ಯಾಪ್ಟನ್ ಗಳಾದ ನಾಗೇಶ್ವರಿ, ಸುಮಂಗಲಾ ಸಿ, ಗೌರಿ, ಮಲ್ಲಮ್ಮ ಗಿರಣಿವಡ್ಡರ ಭಾಗವಹಿಸಿದ್ದರು. ಗೈಡ್ ಕ್ಯಾಪ್ಟನ್ ಸವಿತಾ ಹಾದಿಮನಿ ವರದಿ ವಾಚಿಸಿದರು.