ಜಿಲ್ಲೆಯ ಅಭಿವೃದ್ಧಿ ವಿಷಯ ಮೇಲೆ ಮತಯಾಚನೆ: ಮೃಣಾಲ್‌ ಹೆಬ್ಬಾಳಕರ್

| Published : Apr 05 2024, 01:00 AM IST

ಜಿಲ್ಲೆಯ ಅಭಿವೃದ್ಧಿ ವಿಷಯ ಮೇಲೆ ಮತಯಾಚನೆ: ಮೃಣಾಲ್‌ ಹೆಬ್ಬಾಳಕರ್
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಎಂಜಿನಿಯರಿಂಗ್ ಪದವಿಧರನಾಗಿದ್ದು, ಬೆಳಗಾವಿ ಜಿಲ್ಲೆಯ ಕುರಿತು ಸ್ಪಷ್ಟ ಕಲ್ಪನೆ ಹೊಂದಿದ್ದೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ವಿಷಯ ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಮತ ಕೇಳುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಾನು ಎಂಜಿನಿಯರಿಂಗ್ ಪದವಿಧರನಾಗಿದ್ದು, ಬೆಳಗಾವಿ ಜಿಲ್ಲೆಯ ಕುರಿತು ಸ್ಪಷ್ಟ ಕಲ್ಪನೆ ಹೊಂದಿದ್ದೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ವಿಷಯ ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಮತ ಕೇಳುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಮುತಗಾ, ಶಿಂಧೋಳ್ಳಿ, ಬಸರಿಕಟ್ಟಿ ಮೊದಲಾದ ಗ್ರಾಮಗಳಲ್ಲಿ ಗುರುವಾರ ಪ್ರಚಾರ ಕೈಗೊಂಡು ಮತಯಾಚನೆ ಮಾಡಿ ಮಾತನಾಡಿದ ಅವರು, ಈ ದೇಶ ಕಟ್ಟುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಸಾಕಷ್ಟಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ದೇಶ ಮತ್ತು ರಾಜ್ಯದಲ್ಲಿ ಅಭಿವೃದ್ಧಿ ಮಾಡಿದೆ. ತಾಯಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಭರವಸೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಕಾಂಗ್ರೆಸ್ ಪಕ್ಷ ದೇಶವನ್ನಾಗಲಿ, ಜನರನ್ನಾಗಲಿ ಎಂದೂ ಒಡೆಯುವ ಕೆಲಸ ಮಾಡುವುದಿಲ್ಲ. ನಾವು ಜೋಡಿಸುವ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ, ತಾರತಮ್ಯವಿಲ್ಲದೇ ಅಭಿವೃದ್ಧಿ ಮಾಡುವ ಪಕ್ಷ ನಮ್ಮದು. ಹಾಗಾಗಿಯೇ ಯಾವುದೇ ತಾರತಮ್ಯ ಮಾಡದೇ ಸಮಾಜದ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ರಾಜ್ಯದ ಪ್ರತಿಯೊಂದು ಕುಟುಂಬವೂ ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಂಡಿವೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನೂ ಬಳಸಿಕೊಂಡು ನಾವು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದೇವೆ. ಮೃಣಾಲ್‌ ಹೆಬ್ಬಾಳಕರ್ ಆಯ್ಕೆ ಮಾಡಿ ಕಳಿಸಿದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಜತೆಗೆ ಕೇಂದ್ರದಿಂದಲೂ ಹೆಚ್ಚಿನ ಅನುದಾನ ತರಲಿದ್ದಾನೆ. ಹಾಗಾಗಿ ಭಾರಿ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಶ್ಯಾಮ್ ಮುತಗೇಕರ್, ಗಜಾನನ ಕಣಬರ್ಕರ್, ಶ್ಯಾಮರಾವ್ ಪಾಟೀಲ, ಪಿಂಟು ಮಲ್ಲವ್ವಗೋಳ, ಭರಮಾ ಮಲ್ಲವ್ವಗೋಳ, ವಿಶಾಲ ಪಾಟೀಲ, ಭೀಮ ಓಬಣ್ಣಗೋಳ, ಸ್ನೇಹಲ್ ಪೂಜಾರಿ, ಮಾಧುರಿ ಮುತಗೇಕರ್, ಶೀಲಾ ಮಲ್ಲವ್ವಗೋಳ, ಕೃಷ್ಣ ಮಲ್ಲವ್ವಗೋಳ, ಶಿವು ಸೈಬಣ್ಣವರ, ರಾಜೇಶ್ ಪಾಟೀಲ, ಸುರೇಶ ಪಾಟೀಲ, ಶೀಲಾ ತಿಪ್ಪಣ್ಣಗೋಳ, ಮಲ್ಲಪ್ಪ ಶಹಾಪೂರಕರ್, ಬೀರಾ ಅನಗೋಳ್ಕರ್, ಕೃಷ್ಣ ಅನಗೋಳ್ಕರ್, ದಿಲೀಪ್ ಕೊಂಡಸಕೊಪ್ಪ, ಹೊಳೆಪ್ಪ ಪೂಜೇರಿ, ಬಸವಣ್ಣಿ ಕೊಂಡಸಕೊಪ್ಪ, ಸಿದ್ರಾಯಿ ನಾಗರೊಳ್ಳಿ, ಪರುಶರಾಮ ಕಲ್ಲನಾಂಚೆ, ಯಶವಂತ ಕೋಲಕಾರ, ದೇವೇಂದ್ರ ಸುಳೇಭಾವಿ, ಪಾಪು ಕೋಲಕಾರ, ಯಲ್ಲಪ್ಪ ಸಾಂಬ್ರೇಕರ್, ಯಲ್ಲಪ್ಪ ಚೌಗುಲೆ, ರಾಮಾ ಬೈಲವಾಡ, ಗೋವಿಂದ ಮೊದಲಾದವರು ಉಪಸ್ಥಿತರಿದ್ದರು.