ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಯುವಕರ ಸಂಘದಿಂದ ಪ್ರತಿಭಾ ಪುರಸ್ಕಾರ: ಶ್ರೀನಿವಾಸ

| Published : Jun 28 2025, 12:28 AM IST

ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಯುವಕರ ಸಂಘದಿಂದ ಪ್ರತಿಭಾ ಪುರಸ್ಕಾರ: ಶ್ರೀನಿವಾಸ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದಿಂದ 12ನೇ ವರ್ಷದ ಪ್ರತಿಭಾ ಪುರಸ್ಕಾರಕ್ಕಾಗಿ ಸಮಾಜದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಜಿ.ಶ್ರೀನಿವಾಸ ಹೇಳಿದ್ದಾರೆ.

- ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದವರು ಅರ್ಹರು - - -

ದಾವಣಗೆರೆ: ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದಿಂದ 12ನೇ ವರ್ಷದ ಪ್ರತಿಭಾ ಪುರಸ್ಕಾರಕ್ಕಾಗಿ ಸಮಾಜದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಜಿ.ಶ್ರೀನಿವಾಸ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರವಾಗಿ ನಗದು ಹಾಗೂ ಪಾರಿತೋಶಕ ನೀಡಿ, ಗೌರವಿಸಲಾಗುವುದು ಎಂದರು.

ಅರ್ಹ ವಿದ್ಯಾರ್ಥಿಗಳು ಜು.15ರೊಳಗೆ ತಮ್ಮ ಅಂಕಪಟ್ಟಿಯ ನಕಲು, ಹೆಸರು, ತಂದೆ, ತಾಯಿ ಹೆಸರು, ವಿಳಾಸ, ಆಧಾರ್ ಕಾರ್ಡ್‌, ಜಾತಿ ಪ್ರಮಾಣಪತ್ರ, ಇತ್ತೀಚಿನ ಪಾಸ್ ಪೋರ್ಟ್‌ ಗಾತ್ರದ ಫೋಟೋ ಸಮೇತ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪಿ.ಜಿ.ಶ್ರೀನಿವಾಸ(ಮೊ-98866-14722), ಪ್ರಧಾನ ಕಾರ್ಯದರ್ಶಿಸೇಪೂರ್ ಆನಂದ(99009- 56880), ಶ್ರೀ ಮಾರ್ಕಂಡೇಶ್ವರ ಸಮುದಾಯ ಭವನದ ವ್ಯವಸ್ಥಾಪಕ ಉಮೇಶ ನಾಯ್ಕ (95358-48913) ಅವರನ್ನು ಸಂಪರ್ಕಿಸಲು ತಿಳಿಸಿದರು.

ಸಂಘದಿಂದ ಜು.27ರಂದು ನಗರದ ಎಸ್‌ಕೆಪಿ ರಸ್ತೆಯ ಶ್ರೀ ಮಾರ್ಕಂಡೇಶ್ವರ ಸಮುದಾಯ ಭ‍ವನದಲ್ಲಿ ನಡೆಯುವ ಸಮಾರಂಭದಲ್ಲಿ ಸಾಧಕ ಮಕ್ಕಳಿಗೆ ಸನ್ಮಾನಿಸಿ, ಗೌರವಿಸಲಾಗುವುದು. ಸಮಾರಂಭದ ದಿನ ಮಕ್ಕಳಿಗೆ ಚಿತ್ರಕಲಾ ಮತ್ತು ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಜೇತರಿಗೆ ಸಂಘದಿಂದ ಬಹುಮಾನ ವಿತರಿಸಲಾಗುವುದು ಎಂದರು.

ಸಂಘದ ಖಜಾಂಚಿ ಈ.ನರೇಲ್‌, ನಿರ್ದೇಶಕರಾದ ಪಿ.ರುದ್ರೇಶಿ, ಮಂಜುನಾಥ ಎಲ್.ಸಂಗೀತ್ ಇತರರು ಇದ್ದರು.

- - -

-26ಕೆಡಿವಿಜಿ19.ಜೆಪಿಜಿ:

ದಾವಣಗೆರೆಯಲ್ಲಿ ಗುರುವಾರ ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದ ಅಧ್ಯಕ್ಷ ಪಿ.ಜಿ. ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.