ಹಳಕಟ್ಟಿ-ಅಪ್ಪಣ್ಣ ಜಯಂತಿಗೆ ಸಿದ್ಧತೆ ಕೈಗೊಳ್ಳಿ

| Published : Jun 18 2025, 11:48 PM IST

ಹಳಕಟ್ಟಿ-ಅಪ್ಪಣ್ಣ ಜಯಂತಿಗೆ ಸಿದ್ಧತೆ ಕೈಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಜು. 2ರಂದು ಡಾ. ಫ.ಗು ಹಳಕಟ್ಟಿ ಹಾಗೂ ಜು.22ರಂದು ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಸಾಹಿತ್ಯ ಭವನದಲ್ಲಿ ನಡೆಯಲಿದ್ದು ಅಂದು ಭಾವಚಿತ್ರಕ್ಕೆ ಪೂಜೆ, ವಿಶೇಷ ಉಪನ್ಯಾಸ ನಡೆಯಲಿದೆ.

ಕೊಪ್ಪಳ:

ಜುಲೈನಲ್ಲಿ ಡಾ. ಫ.ಗು. ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಕೆಂಪೇಗೌಡ, ಡಾ. ಫ.ಗು. ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜು. 2ರಂದು ಡಾ. ಫ.ಗು ಹಳಕಟ್ಟಿ ಹಾಗೂ ಜು.22ರಂದು ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಸಾಹಿತ್ಯ ಭವನದಲ್ಲಿ ನಡೆಯಲಿದ್ದು ಅಂದು ಭಾವಚಿತ್ರಕ್ಕೆ ಪೂಜೆ, ವಿಶೇಷ ಉಪನ್ಯಾಸ ನಡೆಯಲಿದೆ. ಹಳಕಟ್ಟಿ ಜಯಂತಿ ದಿನದಂದು ಬೆಳಗ್ಗೆ 8.30ಕ್ಕೆ ಕುಷ್ಟಗಿ ರಸ್ತೆಯಲ್ಲಿರುವ ಡಾ. ಫ.ಗು. ಹಳಕಟ್ಟಿ ವೃತ್ತದಲ್ಲಿ ಪುಷ್ಪಾರ್ಚನೆ

ಜರುಗಲಿದೆ ಎಂದ ಅವರು, ಜಿಲ್ಲಾ ಮಟ್ಟದ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜು.10ರ ಬದಲು 22ರಂದು ಆಯೋಜಿಸಿದ್ದು ಅಂದು ಬೆಳಗ್ಗೆ 8.30ಕ್ಕೆ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ಗಡಿಯಾರ ಕಂಬದ ಹತ್ತಿರವಿರುವ ಅಕ್ಕಮಹಾದೇವಿ ದೇವಸ್ಥಾನದ ಆವರಣದಿಂದ ಆರಂಭಗೊಂಡು ಸಾಹಿತ್ಯ ಭವನದ ವರೆಗೆ ಜರುಗಲಿದೆ ಎಂದರು.

ಮಹಾನೀಯರ ಜಯಂತಿ ದಿನ ಸಾಹಿತ್ಯ ಭವನ, ಡಾ. ಫ.ಗು ಹಳಕಟ್ಟಿ ವೃತ್ತ ಮತ್ತು ರಸ್ತೆ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕು. ಮೆರವಣಿಗೆ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಅಂದು ಶಾಲಾ-ಕಾಲೇಜು, ಗ್ರಾಮ ಪಂಚಾಯಿತಿ ಹಾಗೂ ಇತರೆ ಕಚೇರಿಯಲ್ಲಿ ಜಯಂತಿ ಆಚರಿಸಬೇಕು ಎಂದು ಹೇಳಿದರು. ಕೆಂಪೇಗೌಡ ಜಯಂತಿಯನ್ನು ಜೂ. 27ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ಆಚರಿಸುವ ಕುರಿತು ನಿರ್ಧರಿಸಲಾಯಿತು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ, ಗವಿಸಿದ್ದ ಕೊಪ್ಪಳ, ಈರಣ್ಣ ಕೊರಳಳ್ಳಿ, ಹನುಮಂತ ಕಲಮಂಗಿ, ಶೇಖರ ಇಂಗಳದಾಳ, ಶರಣಬಸವ ಪಾಟೀಲ್, ಗುಡದಪ್ಪ ಹಡಪದ, ವೀರಣ್ಣ ಸಂಕ್ಲಾಪುರ, ಈಶ್ವರಪ್ಪ ದಿನ್ನಿ, ಹಡಪದ ಅಪ್ಪಣ್ಣ ಸಮಾಜದ ಮುಖಂಡರಾದ ಹನುಮಂತಪ್ಪ ಈಶ್ವರಪ್ಪ, ಮಂಜುನಾಥ ಹಡಪದ, ಶಿವುಕುಮಾರ ಕಾರಟಗಿ, ಮೌನೇಶ ಕೊಪ್ಪಳ, ದ್ಯಾಮಣ್ಣ ಮದಿನೂರ, ಈಶಪ್ಪ ಮುದ್ದಾಬಳ್ಳಿ, ವಿರೂಪಾಕ್ಷಪ್ಪ ಮ್ಯಾದ್ನೇರಿ, ಬಸವರಾಜ್ ಇಟಗಿ, ಶರಣಪ್ಪ ಇಟಗಿ, ಗವಿಸಿದ್ದಪ್ಪ ಮಾದಿನೂರ, ಮುತ್ತಣ್ಣ ಬೆಣಕಲ್, ಬಸವರಾಜ ಉಣಿಸಿಹಾಳ, ಅಂದಪ್ಪ, ವಿರೂಪಾಕ್ಷ ದೊಡ್ಡಮನಿ, ಗವಿಸಿದ್ದಪ್ಪ ಕಾಟ್ರಳ್ಳಿ, ಶಂಕ್ರಪ್ಪ ಹಡಪದ, ಈರಣ್ಣ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.