ಸಾರಾಂಶ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಅವರ ಸಮ್ಮುಖದಲ್ಲಿ ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಗಗನ ಬಿಜೆಪಿಗೆ ಸೇರ್ಪಡೆಯಾದರು.
ಚಾಮರಾಜನಗರ: ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎಚ್.ಗಗನ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಅವರ ಸಮ್ಮುಖದಲ್ಲಿ ಗಗನ ಬಿಜೆಪಿ ಸೇರ್ಪಡೆಯಾದರು. ಬಿಜೆಪಿಗೆ ಸೇರ್ಪಡೆಯಾದ ಗ್ರಾಪಂ ಅಧ್ಯಕ್ಷರಿಗೆ ಪಕ್ಷದ ಶಲ್ಯ ಹಾಕಿ ಸ್ವಾಗತಿಸಿ ಬರಮಾಡಿಕೊಂಡ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎನ್. ವಿರಂಜನ್ ಕುಮಾರ್ ಮಾತನಾಡಿ, ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಗನ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸದಸ್ಯರು ಅವಿಶ್ವಾಸ ತಂದು ಅಧ್ಯಕ್ಷರನ್ನು ಪದಚ್ಯತಿಗೊಳಿಸಿದರು. ನಮ್ಮ ಪಕ್ಷದ ಸದಸ್ಯರು ಬೆಂಬಲದಿಂದ 2ನೇ ಬಾರಿಗೆ ಗಗನ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಮುಂದೆ ಕೂಡ್ಲೂರು ಗ್ರಾಮ ಪಂಚಾಯಿತಿ ಬಿಜೆಪಿ ಪಂಚಾಯತಿ ಆಗಲಿದೆ. ಅಧ್ಯಕ್ಷರು ಹೆಚ್ಚಿನ ಜನಸೇವೆಯನ್ನು ಮಾಡಲಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಅಭಿವೃದ್ಧಿ ಪಡಿಸಲಿ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಚಾಮುಲ್ ಮಾಜಿ ಅಧ್ಯಕ್ಷ ನಾಗೇಂದ್ರ, ಮುಖಂಡ ಅರಕಲವಾಡಿ ನಾಗೇಂದ್ರ, ಯುವ ಮೋರ್ಚಾದ ಅಧ್ಯಕ್ಷ ಸೂರ್ಯಕುಮಾರ್, ನಗರ ಮಂಡಲಪ್ರಧಾನ ಕಾರ್ಯದರ್ಶಿಗಳಾದ ಕೂಸಣ್ಣ, ಮಹೇಶ್, ಗ್ರಾ.ಪಂ.ಸದಸ್ಯ ನಾಗೇಂದ್ರ, ಜಿಲ್ಲಾ ಜ್ಯೋತಿಪಣ ಗಾಣಿಗ ಸಂಘದ ಮುಖಂಡ ರಂಗಸ್ವಾಮಿ, ಬಸವಣ್ಣ ಹಾಜರಿದ್ದರು.