ಸಾರಾಂಶ
ಕಬ್ಬು ದರ ನಿಗದಿ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 2900 ರು. ದರ ನಿಗದಿಪಡಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಕಬ್ಬು ದರ ನಿಗದಿ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 2900 ರು. ದರ ನಿಗದಿಪಡಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ರೈತರಿಗೂ ಹಾಗೂ ಕಾರ್ಖಾನೆಯವರಿಗೂ ಅನ್ಯಾಯವಾಗದಂತೆ 2900 ರು. ದರ ನಿಗದಿಪಡಿಸುವುದಾಗಿ ಹಾಗೂ ಇದು ಕಳೆದ ವರ್ಷಕ್ಕಿಂತ 250 ರು. ಹೆಚ್ಚಿನ ದರ ಲಭಿಸುವುದಾಗಿ ತಿಳಿಸಿದರು.
ಕಳೆದ ವರ್ಷ ಪ್ರತಿ ಟನ್ ಕಬ್ಬಿಗೆ 2650 ರು. ನೀಡಲಾಗುತ್ತಿತ್ತು, ಆದರೆ ಈ ವರ್ಷ 2750 ರು. ರಾಜ್ಯ ಸರ್ಕಾರದಿಂದ 50 ರು. ಹಾಗೂ ಸಕ್ಕರೆ ಕಾರ್ಖಾನೆಗಳಿಂದ 50 ರು. ಹೆಚ್ಚುವರಿಯಾಗಿ 2850 ರು. ನೀಡುವ ಬಗ್ಗೆ ಚರ್ಚೆಯಾಗಿತ್ತು. ಆದರೆ ಜಿಲ್ಲೆಯ ಕಬ್ಬು ಬೆಳೆಗಾರರು ಬುಧವಾರ ಹುಮನಾಬಾದ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದವು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಗುರುವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎಲ್ಲ ರೈತ ಮುಖಂಡರ ಹಾಗೂ ಕಬ್ಬು ಬೆಳೆಗಾರ ಸಂಘಟನೆಗಳ ಹಾಗೂ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರ ಸಭೆ ಜರುಗಿತು.ಈ ವರ್ಷ ಅತಿವೃಷ್ಠಿಯಿಂದಾಗಿ ಬಹುತೇಕ ಬೆಳೆಗಳು ಕೈಕೊಟ್ಟಿದ್ದು, ಕಬ್ಬು ಬೆಳೆಗೆ 3100 ರು. ಪ್ರತಿ ಟನ್ಗೆ ದರ ನಿಗದಿಪಡಿಸುವಂತೆ ಸಭೆಯಲ್ಲಿ ರೈತ ಮುಖಂಡರು ಆಗ್ರಹಿಸಿದರು.
ಇದಕ್ಕೆ ಜಿಲ್ಲಾಧಿಕಾರಿಗಳು ಮಾತನಾಡಿ, ರೈತರು ಹಾಗೂ ಕಾರ್ಖಾನೆಗಳು ಇಬ್ಬರೂ ಉಳಿಯಬೇಕು, ಈ ನಿಟ್ಟಿನಲ್ಲಿ 2900 ರು. ದರ ನಿಗದಿಪಡಿಸುವುದಾಗಿ ತಿಳಿಸಿದರು. ಕಳೆದ ವರ್ಷಕ್ಕಿಂತ 250 ರು. ಹೆಚ್ಚಿನ ದರ ರೈತರಿಗೆ ಲಭಿಸಲಿದೆ. ಅಲ್ಲದೇ 2900 ರು. ಕಾರ್ಖಾನೆಗಳು ತಪ್ಪದೇ ಜಮೆ ಮಾಡುವಂತೆ ತಾವು ನೋಡಿಕೊಳ್ಳುವುದಾಗಿ ಸಹ ತಿಳಿಸಿದರು.ಬೀದರ್ನಲ್ಲಿ ಶೇ.9.6 ಇಳುವರಿ ದರ ಇದ್ದು, ಹಾವೇರಿಯಲ್ಲಿಯೂ ಸಹ ಸಮನಾಗಿದ್ದು, ಅಲ್ಲಿಯ ರೈತರು 2900 ರು. ದರಕ್ಕೆ ಒಪ್ಪಿಕೊಂಡಿರುವ ಬಗ್ಗೆ ತಿಳಿಸಿದರು. ಆದರೆ ರೈತ ಮುಖಂಡರು 3100 ರು. ದರ ನಿಗದಿಪಡಿಸುವಂತೆ ಕೋರಿದರು.
ಜಿಲ್ಲಾಧಿಕಾರಿಗಳು 2900 ರು. ನಿಗದಿಪಡಿಸುವುದಾಗಿ ತಮ್ಮ ನಿರ್ಧಾರವನ್ನು ತಿಳಿಸಿದರು. ಇದಕ್ಕೆ ಒಪ್ಪದ ರೈತ ಮುಖಂಡರು ತಮ್ಮ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.ಈ ಸಭೆಯಲ್ಲಿ ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರವೀಣ ಬರಗಲ್ ಸೇರಿದಂತೆ ವಿವಿಧ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಎಂ.ಡಿ.ಗಳು, ಮಾಲೀಕರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))