ವಿಜಯಪುರ: ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಪೆಟ್ರೋಲ್, ಡಿಸೇಲ್ ಮತ್ತು ಎಲ್‌ಪಿಜಿ ದರಗಳಲ್ಲಿ ಆಗುತ್ತಿರುವ ಗಣನೀಯ ಹೆಚ್ಚಳವನ್ನು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದಿಂದ ಖಂಡಿಸಿ, ತಕ್ಷಣವೇ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ: ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಪೆಟ್ರೋಲ್, ಡಿಸೇಲ್ ಮತ್ತು ಎಲ್‌ಪಿಜಿ ದರಗಳಲ್ಲಿ ಆಗುತ್ತಿರುವ ಗಣನೀಯ ಹೆಚ್ಚಳವನ್ನು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದಿಂದ ಖಂಡಿಸಿ, ತಕ್ಷಣವೇ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಲಾಯಿತು.

ಆಪ್‌ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಈ ಅನಪೇಕ್ಷಿತ ಬೆಲೆ ಏರಿಕೆಯು ಸಾಮಾನ್ಯ ಜನರ ಜೀವನದ ಮೇಲೆ ಭಾರಿ ಹೊರೆ ಹೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಲೆ ಇಳಿಸಬೇಕು. ಪೆಟ್ರೋಲ್, ಡಿಸೇಲ್ ದರ ಹೆಚ್ಚಳದಿಂದ ರಸ್ತೆ ಸಾರಿಗೆ ವೆಚ್ಚ ಹೆಚ್ಚಾಗುತ್ತೆ. ಜತೆಗೆ ಎಲ್ಲಾ ನಿತ್ಯಾವಶ್ಯಕ ವಸ್ತುಗಳ ಬೆಲೆ ಸಹ ಏರಿಕೆಯಾಗುತ್ತದೆ. ಕೃಷಿ, ಸಾರಿಗೆ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದರು. ಈ ವೇಳೆ ಆಪ್‌ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.