ಸಾರಾಂಶ
ಅಂಬೇಡ್ಕರ್ ಜಯಂತಿಗಳು ಬರೀ ಭಾಷಣಗಳಾಗದೆ ಎಲ್ಲರ ಮನ- ಮನೆಗಳಲ್ಲಿ ಆಚರಣೆ ಮಾಡುವಂತಾಗಬೇಕು. ಅಂಬೇಡ್ಕರ್ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಮಹಾನ್ ಮಾನವತಾವಾದಿ. ಸಂವಿಧಾನದ ಮೂಲಕ ಎಲ್ಲಾ ಜಾತಿ, ಧರ್ಮ, ಭಾಷೆಯ ಜನರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟರು
ಕನ್ನಡಪ್ರಭ ವಾರ್ತೆ ಹುಣಸೂರು
ವೈವಿಧ್ಯಮಯ ದೇಶವನ್ನು ಒಂದಾಗಿಸಿರುವುದೇ ಡಾ.ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಎಂದು ತಾಪಂ ಇಒ ಶಿವಕುಮಾರ್ ಅಭಿಪ್ರಾಯಪಟ್ಟರು.ತಾಲೂಕಿನ ಬಾಚಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಶುಕ್ರವಾರ ದಸಂಸ ವತಿಯಿಂದ ಅಂಬೇಡ್ಕರ್ರ 133ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ಹಬ್ಬ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಜಯಂತಿಗಳು ಬರೀ ಭಾಷಣಗಳಾಗದೆ ಎಲ್ಲರ ಮನ- ಮನೆಗಳಲ್ಲಿ ಆಚರಣೆ ಮಾಡುವಂತಾಗಬೇಕು. ಅಂಬೇಡ್ಕರ್ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಮಹಾನ್ ಮಾನವತಾವಾದಿ. ಸಂವಿಧಾನದ ಮೂಲಕ ಎಲ್ಲಾ ಜಾತಿ, ಧರ್ಮ, ಭಾಷೆಯ ಜನರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟರು ಎಂದರು.ದಸಂಸ ಜಿಲ್ಲಾ ಸಂಚಾಲಕ ನಿಂಗರಾಜ್ ಮಲ್ಲಾಡಿ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಬಿಇಒ ಎಸ್. ರೇವಣ್ಣ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದರಾಜು ಮಾತನಾಡಿದರು. ನಗರಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್, ಗೋವಿಂದನಹಳ್ಳಿ ಗ್ರಾಪಂ ಪಿಡಿಒ ರಾಜ್ಕುಮಾರ್, ಕಾರ್ಯದರ್ಶಿ ಲೋಕೇಶ, ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ, ದಲಿತ ಮುಖಂಡ ಕೆ. ನಂಜಪ್ಪ, ಕೆಂಪರಾಜು, ಸತ್ಯ ಎಂ.ಎ.ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ, ರಾಜು ಇದ್ದರು.