ಸಾರಾಂಶ
ಮದ್ದೂರು ತಾಲೂಕಿನಲ್ಲಿ ಮಳೆಯಿಂದಾಗಿ ನಿಲುವಾಗಿಲು ಗ್ರಾಮದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲದೇ, ರೈತರ ಜಮೀನುಗಳಲ್ಲಿ ಬೆಳೆದಿದ್ದ ಭತ್ತ, ಕಬ್ಬು ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ರಾಷ್ಟೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಮಳೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ರಾಷ್ಟ್ರೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.ತಾಲೂಕಿನ ವಳಗೆರೆಹಳ್ಳಿ, ಸೊಳ್ಳೆಪುರ ಹಾಗೂ ಇನ್ನಿತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ಮಳೆಯಿಂದಾಗಿ ನಿಲುವಾಗಿಲು ಗ್ರಾಮದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲದೇ, ರೈತರ ಜಮೀನುಗಳಲ್ಲಿ ಬೆಳೆದಿದ್ದ ಭತ್ತ, ಕಬ್ಬು ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ರಾಷ್ಟೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ಒದಗಿಸಿ ಕೊಡಲಾಗುವುದು. ಈ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆತ್ಮ ವಿಶ್ವಾಸ ತುಂಬಿದರು.ವಳಗೆರೆಹಳ್ಳಿ ಸಮೀಪ ಇರುವ ಹೆಬ್ಬಾಳ್ಳದಲ್ಲಿ ಭಾರಿ ಮಳೆ ಬಂದಾಗ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶವಾಗಿ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹೆಬ್ಬಾಳ್ಳದ ನೀರು ರೈತರ ಜಮೀನುಗಳಿಗೆ ನುಗ್ಗಿ ಹಾನಿಯಾಗದಂತೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಗ್ರಾಪಂ ಸದಸ್ಯ ಸುನೀಲ್, ಕಾಂಗ್ರೆಸ್ ಮುಖಂಡರಾದ ಪುಟ್ಟರಾಜು, ಆದೀಶ್, ಅಲೋಕ್, ತಾ.ಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್, ಲೋಕೋಪಯೋಗಿ ಇಲಾಖೆಯ ಎಇಇ ದೇವಾನಂದ್, ಜೆಇ ಹನುಮಂತ್ ಮತ್ತಿತರರು ಇದ್ದರು.