ಕನ್ನಡಪ್ರಭ ವಾರ್ತೆ ಗೋಕಾಕಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕ ತಾಲೂಕು ಗಂಗಾಮತಸ್ಥರ ಯುವಜನ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ನಗರದ ಬಸವೇಶ್ವರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿವಿಧಾನಸೌಧದಲ್ಲಿ ಮಂಗಳವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಪ್ರತಿಭಾನ್ವಿತ ವಿದ್ಯಾರ್ಥಿಯಾದ ಕುಮಾರಿ ಅಂಜಲಿ ಅಂಬಿಗೇರ ಅವಳನ್ನು ಭೀಕರವಾಗಿ ಹತ್ಯೆ ಮಾಡಿರುವುದನ್ನು ಸಮಾಜವು ತೀವೃವಾಗಿ ಖಂಡಿಸುತ್ತದೆ. ಇದರಿಂದ ನಮ್ಮ ಸಮಾಜಕ್ಕೆ ತುಂಬಾಲರದಷ್ಟು ನಷ್ಟವಾಗಿದೆ. ಸಮಾಜದಲ್ಲಿ ಈ ರೀತಿ ಹಾಡುಹಗಲೇ ಕೊಲೆಯಾಗುತ್ತಿರುವುದು ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಆರೋಪಿಗೆ ಉಗ್ರವಾದ ಮತ್ತು ಕಠಿಣ ಶಿಕ್ಷೆ ವಿಧಿಸದೇ ಇದ್ದಲ್ಲಿ ಉತ್ತೇಜನ ನೀಡಿದಂತಾಗುತ್ತದೆ. ಆರೋಪಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ವಿಧಿಸಬೇಕು. ಹತ್ಯೆಗಿಡಾದ ವಿದ್ಯಾರ್ಥಿ ಕುಟುಂಬ ಅತ್ಯಂತ ಕಡುಬಡತನ ಕುಟುಂಬವಾಗಿದ್ದು ಅವರಿಗೆ ₹1 ಕೋಟಿ ಪರಿಹಾರದೊಂದಿಗೆ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಗೋಕಾಕ ತಾಲೂಕು ಗಂಗಾಮತಸ್ಥರ ಯುವಜನ ಸಂಘ ತಾಲೂಕು ಅಧ್ಯಕ್ಷ ಎಂ.ಎಲ್.ತಳವಾರ, ಕಾರ್ಯದರ್ಶಿ ಲಕ್ಷ್ಮಣ ಯಮಕನಮರಡಿ, ಮೂಡಲಗಿ ತಾಲೂಕು ಅಧ್ಯಕ್ಷ ಕಾಶಪ್ಪ ಕೋಣಿ, ಕೊಣ್ಣೂರ ಪಟ್ಟಣ ಅಧ್ಯಕ್ಷ ಸುನೀಲ ಜಾಡಾಗೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜಯ ಪಾಟೀಲ, ಮುಖಂಡರುಗಳಾದ ಬಸವರಾಜ ಮುತ್ಯಾಗೋಳ, ರಾಜು ಮುಂಡಾಶಿ, ಆನಂದ ಹಿರೇಹೊಳಿ, ಹನಮಂತ ಕಾಳಮ್ಮನಗುಡಿ, ಲಕ್ಷ್ಮಣ ಮಿಶಾಳೆ, ಕಲ್ಲನಾಥ ಪೂಜಾರಿ, ಯಲ್ಲವ್ವ ಕಾನೂರಿ, ತಮ್ಮಣ್ಣ ಚಿಗರಿ ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳಾದ ಆನಂದ ಪಾಟೀಲ, ಸಂಜು ಚಿಪ್ಪಲಕಟ್ಟಿ, ಬಸವರಾಜ ಖಾನಪ್ಪನವರ, ಕಿರಣ ಡಮಾಮಗರ, ಸುರೇಶ ಪತ್ತಾರ, ರಾಜೇಶ್ವರಿ ಒಡೆಯರ ಇದ್ದರು.
ಅಂಜಲಿ ಹತ್ಯೆ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕ ತಾಲೂಕು ಗಂಗಾಮತಸ್ಥರ ಯುವಜನ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ನಗರದ ಬಸವೇಶ್ವರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿವಿಧಾನಸೌಧದಲ್ಲಿ ಮಂಗಳವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.