ಸಿಎಂ ಮುಸ್ಲಿಂ ಓಲೈಕೆ ಹೇಳಿಕೆ ಖಂಡಿಸಿ ಪ್ರತಿಭಟನೆ

| Published : Dec 09 2023, 01:15 AM IST

ಸಾರಾಂಶ

ಮುಸ್ಲಿಂರಿಗೆ ಪ್ರತ್ಯೇಕ ಅನುದಾನ ನೀಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ. ಭಾರತದ ಯಾವುದೇ ರಾಜ್ಯ ಅಥವಾ ಯಾವುದೇ ಭಾಗದಲ್ಲಿ ವಾಸವಾಗಿರುವ ನಾಗರಿಕರ ಯಾವುದೇ ವಿಭಾಗವು ತನ್ನ ಲಿಪಿ ಹಾಗೂ ಸಂಸ್ಕೃತಿಯನ್ನು ಹೊಂದಿದ್ದರೆ ಅದನ್ನ ರಕ್ಷಿಸುವ ಹಕ್ಕು ಇರುತ್ತದೆ. ಆದರೆ ಮುಸ್ಲಿಂ ಸಮುದಾಯಕ್ಕೆ ವಿಶಿಷ್ಟ ಭಾಷೆಯಾಗಲಿ, ಲಿಪಿಯಾಗಲಿ, ಸಂಪ್ರದಾಯವಾಗಲಿ ಇಲ್ಲದೇ ಇರುವುದರಿಂದ ಆರ್ಟಿಕಲ್ 26ರ ಪ್ರಕಾರ ಇಲ್ಲದೇ ಇರುವುದರಿಂದ ಅವರಿಗೆ ಅನುದಾನ ನೀಡಲು ಬರುವುದಿಲ್ಲ. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಮುಸಲ್ಮಾನರಿಗೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದಿದ್ದ ಸಿದ್ದರಾಮಯ್ಯ

ವಿಹಿಂಪ, ಬಜರಂಗದಳದ ಕಾರ್ಯಕರ್ತರ ವಿರೋಧ, ಡಿಸಿಗೆ ಮನವಿ ಸಲ್ಲಿಕೆಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮುಸ್ಲಿಂ ಸುಮುದಾಯಕ್ಕೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೇಳಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಭಾಗವಹಿಸಿದ್ದರು. ಆಗ ಮುಸ್ಲಿಮರಿಗೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಅಲ್ಲದೇ ಹುಬ್ಬಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಮುಖ್ಯಮಂತ್ರಿಯವರು ಶಂಕಿತ ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಇದನ್ನು ಕೂಡ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದರು.

ಮುಸ್ಲಿಂರಿಗೆ ಪ್ರತ್ಯೇಕ ಅನುದಾನ ನೀಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ. ಭಾರತದ ಯಾವುದೇ ರಾಜ್ಯ ಅಥವಾ ಯಾವುದೇ ಭಾಗದಲ್ಲಿ ವಾಸವಾಗಿರುವ ನಾಗರಿಕರ ಯಾವುದೇ ವಿಭಾಗವು ತನ್ನ ಲಿಪಿ ಹಾಗೂ ಸಂಸ್ಕೃತಿಯನ್ನು ಹೊಂದಿದ್ದರೆ ಅದನ್ನ ರಕ್ಷಿಸುವ ಹಕ್ಕು ಇರುತ್ತದೆ. ಆದರೆ ಮುಸ್ಲಿಂ ಸಮುದಾಯಕ್ಕೆ ವಿಶಿಷ್ಟ ಭಾಷೆಯಾಗಲಿ, ಲಿಪಿಯಾಗಲಿ, ಸಂಪ್ರದಾಯವಾಗಲಿ ಇಲ್ಲದೇ ಇರುವುದರಿಂದ ಆರ್ಟಿಕಲ್ 26ರ ಪ್ರಕಾರ ಇಲ್ಲದೇ ಇರುವುದರಿಂದ ಅವರಿಗೆ ಅನುದಾನ ನೀಡಲು ಬರುವುದಿಲ್ಲ. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಅಲ್ಲದೇ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ತನ್ವೀರ್‌ಪೀರಾ ಎಂಬ ಮುಸ್ಲಿಂ ಮೌಲ್ವಿಗೆ ಶಂಕಿತ ಭಯೋತ್ಪಾದಕರ ಸಂಘಟನೆಗಳನಂಟು ಇದೆ. ಈತ ಒಬ್ಬ ದೇಶದ್ರೋಹಿ ಇಂತಹವರ ಜೊತೆ ವೇದಿಕೆ ಹಂಚಿಕೊಂಡಿರುವುದು ಸರಿಯಲ್ಲ. ಭಾರತದ ಆಂತರಿಕ ಭದ್ರತೆಗೆ ಸವಾಲಾಗಿರುವ ಈ ಪ್ರಕರಣವನ್ನು ಕೂಡ ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವಾಸುದೇವ್, ರಾಜೇಶ್‌ಗೌಡ, ನಾರಾಯಣವರ್ಣೇಕರ್, ವಡಿವೇಲ್ ಸೇರಿದಂತೆ ಇದ್ದರು.

- - -

8ಎಸ್‌ಎಂಜಿಕೆಪಿ03

ಮುಸ್ಲಿಂ ಸುಮುದಾಯಕ್ಕೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹೇಳಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.