ಸಾರಾಂಶ
ಸಾಗರ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆದಿರುವುದನ್ನು ಖಂಡಿಸಿ ಸೋಮವಾರ ಗ್ರಾಮಸ್ಥರು ಬಾರ್ ಎದುರಿನ ರಾಷ್ಟ್ರೀಯ ಹೆದ್ದಾರಿ ೨೦೬ನ್ನು ತಡೆದು ಪ್ರತಿಭಟನೆ ನಡೆಸಿದರು.ಕಳೆದ ಅನೇಕ ತಿಂಗಳುಗಳಿಂದ ಅಲಳ್ಳಿಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯುವುದನ್ನು ನಾವು ವಿರೋಧಿಸಿಕೊಂಡು ಬಂದಿದ್ದೇವೆ. ವಿರೋಧದ ನಡುವೆಯೂ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯಲಾಗಿದೆ ಎಂದು ಗ್ರಾಮಸ್ಥರು ದೂರಿದರು.ಹೊಸದಾಗಿ ತೆರೆದಿರುವ ಬಾರ್ ಎಂಡ್ ರೆಸ್ಟೋರೆಂಟ್ನಿಂದ ಸ್ವಲ್ಪದೂರದಲ್ಲಿ ಅಂಬೇಡ್ಕರ್ ವಸತಿ ಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆ ಇದ್ದು ಮಕ್ಕಳಿಗೆ ತೊಂದರೆಯಾಗುತ್ತದೆ. ಈ ರಸ್ತೆಯಲ್ಲಿ ಮಕ್ಕಳು, ಮಹಿಳೆಯರು ಓಡಾಡುತ್ತಿರುತ್ತಾರೆ. ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ವಾಹನ ಸಂಚಾರ ವಿಪರೀತವಾಗಿರುತ್ತದೆ. ಇಂತಹ ಕಡೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯುವುದು ಬೇಡ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಕಳೆದ ಮೂರು ತಿಂಗಳ ಹಿಂದೆ ಬಾರ್ ಮಾಡಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದೆವು. ಇದೀಗ ದಿಢೀರನೆ ಗ್ರಾಮಸ್ಥರ ವಿರೋಧದ ನಡುವೆ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯಲಾಗಿದೆ. ತಕ್ಷಣ ಇದನ್ನು ಬಂದ್ ಮಾಡಬೇಕು ಎಂದು ಪ್ರತಿಭಟನಾನಿರತ ಗ್ರಾಮಸ್ಥರು ಒತ್ತಾಯಿಸಿದರು. ಗ್ರಾಮ ಸುಧಾರಣಾ ಸಮಿತಿ ಅಧ್ಯಕ್ಷ ಸುರೇಶ್, ಜಗನ್ನಾಥ್, ಚಂದ್ರಪ್ಪ ಇದ್ದರು. ೧೬ಕೆ.ಎಸ್.ಎ.ಜಿ.೩ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಆಲಳ್ಳಿ ಗ್ರಾಮದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆದಿರುವುದನ್ನು ಖಂಡಿಸಿ ರಸ್ತೆತಡೆ ನಡೆಸಲಾಯಿತು.