ಸಾರಾಂಶ
ಸೋಮನಹಳ್ಳಿ ಟೋಲ್ ಬಳಿ ಟೋಲ್ ವಸೂಲಿ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಿದರು.
ಕನಕಪುರ: ಸೋಮನಹಳ್ಳಿ ಟೋಲ್ ಬಳಿ ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿಯ ರೈತರು ಹಾಗೂ ಸಾರ್ವಜನಿಕರು ಟೋಲ್ ವಸೂಲಿ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಿದರು.ಸೋಮನಹಳ್ಳಿ ಟೋಲ್ಗೇಟ್ ಬಳಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡರಾದ ಗೋವಿಂದಯ್ಯ, ರುದ್ರೇಶ್, ಟೋಲ್ ಸುಂಕ ವಸೂಲಿಗೆ ಮೊದಲು ಟೋಲ್ನ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೈತರ ಹಾಗೂ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದೆ ಏಕಾಏಕಿ ಟೋಲ್ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ, ಹಾರೋಹಳ್ಳಿ ಹಾಗೂ ಮರಳವಾಡಿ ವಾಹನ ಸಂಚಾಲಕರಿಗೆ ಸರ್ವೀಸ್ ರಸ್ತೆ ಒದಗಿಸುವವರೆಗೂ ಟೋಲ್ ಸಂಗ್ರಹ ನಿಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.