ಸಾರಾಂಶ
ರೈತರಿಗೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ನೀಡುವಂತಹ ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಪಾತ, ತಾರತಮ್ಯ ಸಹಿಸಲ್ಲ ಜೊತೆಗೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಬೇಕು. ರೈತರಿಗೆ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ತಲುಪಿಸುವಂತಹ ಕೆಲಸ ಅಧಿಕಾರಿಗಳು ಮಾಡಬೇಕು.
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಬಿತ್ತನೆ ಬೀಜ, ರಸಗೊಬ್ಬರ ಇತ್ಯಾದಿಗಳ ವಿತರಣೆಯಲ್ಲಿ ಹಾಗೂ ಸರ್ಕಾರದಿಂದ ರೈತರಿಗೆ ಸಿಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಯಾವುದೇ ತಾರತಮ್ಯ ಮಾಡದೆ ವಿತರಣೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕೃಷಿ ಇಲಾಖೆ ಅಧಿಕಾರಿ ಲಕ್ಷ್ಮೀಯವರಿಗೆ ಖಡಕ್ ಎಚ್ಚರಿಕೆ ನೀಡಿದರು.ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿದ್ದ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾರತಮ್ಯ ಮಾಡಿದರೆ ಸಹಿಸೋಲ್ಲರೈತರಿಗೆ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ನೀಡುವಂತಹ ಬಿತ್ತನೆ ಬೀಜ ವಿತರಣೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಪಾತ, ತಾರತಮ್ಯ ಸಹಿಸಲ್ಲ ಜೊತೆಗೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ರೈತರಿಗೆ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ತಲುಪಿಸುವಂತಹ ಕೆಲಸ ಅಧಿಕಾರಿಗಳು ಮಾಡಬೇಕು ಎಂದರು.
ನಂತರ ಕೃಷಿ ಇಲಾಖೆಯ ದಾಸ್ತಾನು ಮಾಳಿಗೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದಾಸ್ತಾನುನಲ್ಲಿ ಇದ್ದ ಹಲವು ಮೂಟೆಗಳಲ್ಲಿ ಕಳಪೆ ಗುಣಮಟ್ಟದ ಕಡಲೆಕಾಯಿ ಇದ್ದದ್ದು ಕಂಡುಬಂದ ಹಿನ್ನೆಲೆಯಲ್ಲಿ ತಕ್ಷಣ ಈ ಬಗ್ಗೆ ಸರಬರಾಜು ಮಾಡಿರುವ ಕಂಪನಿಯವರಿಗೆ ಮಾಹಿತಿ ನೀಡಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜನಗಳನ್ನು ಪೂರೈಸುವಂತೆ ತಿಳಿಸಿ. ಇಲ್ಲದಿದ್ದರೆ ಸರಬರಾಜುದಾರರ ವಿರುದ್ದ ಕೇಸು ದಾಖಲಿಸುವಂತೆ ಸೂಚನೆ ನೀಡಿದರು.ಬಿತ್ತನೆಬೀಜ ವಿತರಣೆ
ಇದೇ ವೇಳೆ ರೈತರಿಗೆ ಕಡಲೆ ಕಾಯಿ, ತೊಗರಿ ಇತ್ಯಾದಿ ಬಿತ್ತನೆ ಬೀಜಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ಲಕ್ಷ್ಮೀ, ಅಧಿಕಾರಿಗಳಾದ ನಾರಾಯಣರೆಡ್ಡಿ, ಬಾಬು ರೈತ ಮುಖಂಡರು ಸೇರಿದಂತೆ ರೈತರು ಇದ್ದರು.