ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆ ಮಾಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಇವರು 70 ಸಾವಿರ ಹಣ ಪಡೆಯುವಾಗ ಲೋಕಾ ಬಲೆಗೆ ಸಿಲುಕಿದ್ದಾರೆ.
ಚಿಕ್ಕಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಮಂಗಳವಾರ ಸಂಜೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆ ಮಾಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಇವರು 70 ಸಾವಿರ ಹಣ ಪಡೆಯುವಾಗ ಲೋಕಾ ಬಲೆಗೆ ಸಿಲುಕಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ಮೊಟ್ಲೂರು ಗ್ರಾಮದ ರಘು ಎಂಬಾತನಿಂದ ಲಂಚ ಪಡೆಯುವಾಗ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಸಿಕೆಬಿ-4 ಪಿಎಸ್ಐ ಶರಣಪ್ಪ
ಸಿಕೆಬಿ-5 ಎಎಸ್ಐ ವೆಂಕಟೇಶಪ್ಪ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.