ಕಾವೇರಿ ನೀರು ಸರಬರಾಜು ಕಾಮಗಾರಿಗೆ ಪೂಜೆ

| Published : Jun 22 2025, 11:47 PM IST / Updated: Jun 22 2025, 11:48 PM IST

ಸಾರಾಂಶ

ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಇಚ್ಛೆಯಂತೆ ನಗರದ ಎಲ್ಲಾ ವಾರ್ಡ್‌ಗಳಿಗೆ ಕಾವೇರಿ ನೀರು ಸರಬರಾಜು ಮಾಡುವ ಉದ್ದೇಶದಿಂದ ಅಭಿವೃದ್ಧಿ ಕೆಲಸಗಳನ್ನು ಆರಂಭಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್‌.ರವಿ ತಿಳಿಸಿದರು.

ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಇಚ್ಛೆಯಂತೆ ನಗರದ ಎಲ್ಲಾ ವಾರ್ಡ್‌ಗಳಿಗೆ ಕಾವೇರಿ ನೀರು ಸರಬರಾಜು ಮಾಡುವ ಉದ್ದೇಶದಿಂದ ಅಭಿವೃದ್ಧಿ ಕೆಲಸಗಳನ್ನು ಆರಂಭಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್‌.ರವಿ ತಿಳಿಸಿದರು.

ನಗರದ ನೀಲಕಂಠೇಶ್ವರ ಬಡಾವಣೆಯಲ್ಲಿ ಕಾವೇರಿ ನೀರು ಪೈಪ್ ಅಳವಡಿಸುವ ಕಾಮಗಾರಿಗೆ ಪೂಜೆ ನೇರವೇರಿಸಿ ಮಾತನಾಡಿದ ಅವರು, ನಗರದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಗರೋತ್ಥಾನ ಯೋಜನೆಯಡಿ ರಸ್ತೆ, ಚರಂಡಿ, ಉದ್ಯಾನವನ ನಿರ್ಮಾಣ ಮಾಡುವುದರ ಜೊತೆಗೆ ಕುಡಿಯುವ ನೀರಿಗೆ ಆದ್ಯತೆ ನೀಡಿ ಈಗಾಗಲೇ ಕೆಲ ಬಡಾವಣೆಗಳಿಗೆ ಕಾವೇರಿ ನೀರನ್ನು ನೀಡಲಾಗುತ್ತಿದ್ದು, ಉಳಿದ ವಾರ್ಡಗಳ ಅಭಿವೃದ್ಧಿಗೆ ಈ ಕಾಮಗಾರಿಯನ್ನು ಆರಂಭಿಸಿರುವುದಾಗಿ ತಿಳಿಸಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಹೇಮಾರಾಜು,ನಗರಸಭಾ ಸದಸ್ಯ ರಾದ ಮೋಹನ್, ವಿಜಯ್ ಕುಮಾರ್, ಮಾಜಿ ಅಧ್ಯಕ್ಷ ದಿಲೀಪ್, ಮುಖಂಡರಾದ ನಾಚಿ ನಾಗರಾಜು, ಕುಮಾರ್, ರವಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.