ಸಿರವಾರದಲ್ಲಿ ಟಿಪ್ಪು ನಾಮಫಲಕಕ್ಕೆ ಅಪಮಾನ, ಪ್ರತಿಭಟನೆಸಿರವಾರದಲ್ಲಿ ಮಂಗಳವಾರ ರಾತ್ರಿ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವುದನ್ನು ಖಂಡಿಸಿ ಮುಸ್ಲಿಂ ಸಮುದಾಯದವರು ಟೈರಿಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದರು. ಶಾಸಕ ಹಂಪಯ್ಯ, ತಹಸೀಲ್ದಾರ್ ಅವರು ಮುಸ್ಲಿಂ ಸಮುದಾಯದವರೊಂದಿಗೆ ಸಂಧಾನ ನಡೆಸಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು.