ಆ.18ಕ್ಕೆ ಮಾದಿಗರ ಮಹಾಯುದ್ಧ, ಬೃಹತ್ ಸಮಾವೇಶ: ಬಿ.ನರಸಪ್ಪಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿ ಮಾದಿಗರ ಮಹಾಯುದ್ಧ ಬೃಹತ್ ಸಮಾವೇಶವನ್ನು ಬರುವ ಆ.18 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಈ ಹೋರಾಟಕ್ಕೆ ಪದ್ಮಶ್ರೀ ಮಂದಕೃಷ್ಣ ಮಾದಿಗ ಅವರು ಭಾಗವಹಿಸಲಿದ್ದಾರೆ ಎಂದು ಮಾದಿಗ ದಂಡೋರ (ಮಾದಿಗ ಮೀಸಲಾತಿ ಹೊರಾಟ ಸಮಿತಿ) ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ ತಿಳಿಸಿದರು.