ಸಾರಾಂಶ
ಮಡಿಕೇರಿ : ಜಿಲ್ಲೆಯಾದ್ಯಂತ ಶನಿವಾರ ಮಳೆ ಬಿಡುವು ನೀಡಿ ಕೆಲವೆಡೆ ಬಿಸಿಲಿನ ವಾತಾವರಣ ಕಂಡುಬಂತು. ಸತತ ಮಳೆಯಿಂದ ಸಮಸ್ಯೆಗೀಡಾಗಿದ್ದ ಜನರು ಮಳೆ ಬಿಡುವು ನೀಡಿದರಿಂದ ನಿಟ್ಟುಸಿರು ಬಿಡುವಂತಾಯಿತು.
ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಸೋಮವಾರಪೇಟೆ ಹೋಬಳಿ ಕುಂಬೂರು, ಜಂಬೂರು ಹಾಗೂ ಶಾಂತಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳನ್ನು ಪರಿಶೀಲನೆ ನಡೆಸಿದರು.
ಮಳೆಯಿಂದ ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಅವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 44.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.27 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 737.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 333.29 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ 126.78 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 41.95 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 22.50 ಮಿ.ಮೀ. ಮಳೆಯಾಗಿದೆ, ಸೋಮವಾರಪೇಟೆ ತಾಲೂಕಿನಲ್ಲಿ 14.70 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ 15.10 ಮಿ.ಮೀ. ಮಳೆಯಾಗಿದೆ
ಹೋಬಳಿ ವಿವರ: ಮಡಿಕೇರಿ ಕಸಬಾ 176, ನಾಪೋಕ್ಲು 80, ಸಂಪಾಜೆ 118.50, ಭಾಗಮಂಡಲ 132.60, ವಿರಾಜಪೇಟೆ 41.40, ಅಮ್ಮತ್ತಿ 42.50, ಹುದಿಕೇರಿ 28, ಶ್ರೀಮಂಗಲ 31, ಪೊನ್ನಂಪೇಟೆ 20, ಬಾಳೆಲೆ 11, ಸೋಮವಾರಪೇಟೆ 14.80, ಶನಿವಾರಸಂತೆ 4, ಶಾಂತಳ್ಳಿ 24, ಕೊಡ್ಲಿಪೇಟೆ 16, ಕುಶಾಲನಗರ 6, ಸುಂಟಿಕೊಪ್ಪ 24.20 ಮಿ.ಮೀ.ಮಳೆಯಾಗಿದೆ.