ಕೊಡಗಿನ ಇತಿಹಾಸ ಪ್ರಸಿದ್ಧ ಹಾಗೂ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಕಲಾಕೃತಿ ಈ ಬಾರಿಯ ಮಡಿಕೇರಿ ರಾಜಾಸೀಟು ಫಲಪುಷ್ಪ ಪ್ರದರ್ಶನದ ಪ್ರಮುಖ ಕಲಾಕೃತಿಯಾಗಿ ಮೂಡಿಬರಲಿದೆ.
ವಿಘ್ನೇಶ್ ಎಂ. ಭೂತನಕಾಡು
ಕನ್ನಡಪ್ರಭ ವಾರ್ತೆ ಮಡಿಕೇರಿಕೊಡಗಿನ ಇತಿಹಾಸ ಪ್ರಸಿದ್ಧ ಹಾಗೂ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಕಲಾಕೃತಿ ಈ ಬಾರಿಯ ಮಡಿಕೇರಿ ರಾಜಾಸೀಟು ಫಲಪುಷ್ಪ ಪ್ರದರ್ಶನದ ಪ್ರಮುಖ ಕಲಾಕೃತಿಯಾಗಿ ಮೂಡಿಬರಲಿದೆ.
ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕಾ ಇಲಾಖೆಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜ.24ರಿಂದ 26ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಶಾಲೆಯಿಂದ ಶಾಲಾ ಸಮವಸ್ತ್ರದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ.33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಕೊಡಗಿನ ಇತಿಹಾಸ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿ ನಿರ್ಮಾಣವಾಗಲಿದೆ. ಫಲಪುಷ್ಪ ಪ್ರದರ್ಶನ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 8000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ ಗಳಲ್ಲಿ ಸುಮಾರು 20000 ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.
ಭಾರತ ಏಕಿಕರಣದ ಸಂಕೇತವಾಗಿ ಕನ್ನಡ ಅಕ್ಷರಗಳ ಕಲಾಕೃತಿಗಳನ್ನು 2.5 ಅಡಿ ಮತ್ತು 2.0 ಅಡಿ ಎತ್ತರದಲ್ಲಿ ನಾಲ್ಕು ಕಲಾಕೃತಿಗಳು ಮತ್ತು 4.5 ಅಡಿ ಮತ್ತು 4.0 ಅಡಿ ಎತ್ತರದಲ್ಲಿ 2 ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತಿದೆ.ಸಂಗೀತ ಕಲಾಕೃತಿಗಳಾದ 2 ಸಂಖ್ಯೆ ತಬಲ ಕಲಾಕೃತಿಯನ್ನು 2.5 ಅಡಿ ಎತ್ತರ ಮತ್ತು 3.0 ಅಡಿ ಎತ್ತರ ಕಲಾಕೃತಿಗಳು, ಪಿಯಾನೊ ಕಲಾಕೃತಿಯನ್ನು 5.0 ಅಡಿ ಎತ್ತರ, 4.0 ಅಡಿ ಅಗಲ ಮತ್ತು 3.0 ಅಡಿ ಉದ್ದದ ಕಲಾಕೃತಿಗಳು, ಹರ್ಪ್ ಕಲಾಕೃತಿಯನ್ನು 6.0 ಅಡಿ ಎತ್ತರ, 3.0 ಅಡಿ ಅಗಲ ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಆಕರ್ಷಣೀಯವಾಗಿ ಮೂಡಿಬರಲಿದೆ. ಗಣರಾಜ್ಯೋತ್ಸವ ಅಂಗವಾಗಿ ಅಮರ್ ಜವಾನ್ ಕಲಾಕೃತಿಯನ್ನು 8.0 ಅಡಿ ಎತ್ತರದಲ್ಲಿ ಕಲಾಕೃತಿಗಳನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಲಾಗುತ್ತದೆ. ಹಾರುವ ಹಕ್ಕಿಯ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ. ಮೀನಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ತಯಾರಿಸಲಾಗುತ್ತದೆ.
ಚಿಟ್ಟೆ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಮಿಕ್ಕಿ ಮೌಸ್, ಡೊರೇಮ್ಯಾನ್ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗುತ್ತದೆ. ಹೃದಯ ಮಾದರಿ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಮಾಡಲಾಗುತ್ತದೆ.ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಹಣ್ಣು / ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗುತ್ತಿದೆ. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರರ್ದಶನ, ಇಕೆಬಾನೆ ಹೂವಿನ ಜೋಡಣೆ ಪ್ರದರ್ಶನ ಇರಲಿದೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8.00ರಿಂದ 10.00 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಸಿದ್ಧಪಡಿಸಲಾಗುತ್ತದೆ. ವಿವಿಧ ಬಗೆಯ ಮಳಿಗೆಗಳು
ಫಲಪುಷ್ಪ ಪ್ರದರ್ಶನ ಅಂಗವಾಗಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ 60 ಸಂಖ್ಯೆಯ ವಿವಿಧ ಇಲಾಖೆಗಳು, ಏಜೆನ್ಸಿಗಳು, ಸಂಸ್ಥೆಗಳು ಮಳಿಗೆಯನ್ನು ತೆರೆಯಲಾಗುತ್ತದೆ. ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಪ್ ಕಾಮ್ಸ್ , ಕೈಗಾರಿಕೆ ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಮಳಿಗೆಗಗಳು ಇರಲಿದೆ. 50 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತದೆ. ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳನ್ನು ಪ್ರದರ್ಶಿಸುವ ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶನಕ್ಕೆ ಬಹುಮಾನ ನೀಡಲಾಗುವುದು. ಆಸಕ್ತರು ತೋಟಗಾರಿಕೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ....ಬಾಕ್ಸ್...
ವಿವಿಧ ಸ್ಪರ್ಧೆಗಳು:ತೋಟಗಾರಿಕೆಯಲ್ಲಿ ಆಸಕ್ತಿ ಇರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುವುದು. ಆಸಕ್ತರು ಇಂದಿನಿಂದಲೇ ಅಥವಾ ನೇರವಾಗಿ ಜ.24ರ ಬೆಳಗ್ಗೆ 8.00 ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ (ದೂರವಾಣಿ ಸಂಖ್ಯೆ: 9448613355) ಹೆಸರನ್ನು ನೊಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಜ. 24ರಿಂದ 26ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಕಲಾಕೃತಿ ಮುಖ್ಯವಾಗಿರಲಿದೆ. ಇದರೊಂದಿಗೆ ಹಲವು ವಿಶೇಷತೆಗಳು ಈ ಪ್ರದರ್ಶನದಲ್ಲಿ ಕಂಡು ಬರಲಿವೆ. ಫಲಪುಷ್ಪ ಪ್ರದರ್ಶನ ಅಂಗವಾಗಿ ವಿವಿಧ ಬಗೆಯ ಮಳಿಗೆಗಳು ಇರಲಿವೆ. ಅಲ್ಲದೆ ನಾನಾ ಇಲಾಖೆಗಳ ಮಾಹಿತಿ ನೀಡುವ ಸಲುವಾಗಿ ಮಳಿಗೆಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರಿಗಾಗಿ ವಿವಿಧ ಬಗೆಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.
-ಎಸ್.ಜೆ. ಸೋಮಶೇಖರ್, ಜಿಲ್ಲಾಧಿಕಾರಿ ಹಾಗೂಅಧ್ಯಕ್ಷರು ರಾಜಾಸೀಟು ಅಭಿವೃದ್ದಿ ಸಮಿತಿ ಮಡಿಕೇರಿ