ಬಾಬು ಪಿಲಾರ್‌ಗೆ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಿದ ಸ್ಪೀಕರ್

| Published : Nov 29 2024, 01:04 AM IST

ಬಾಬು ಪಿಲಾರ್‌ಗೆ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಿದ ಸ್ಪೀಕರ್
Share this Article
  • FB
  • TW
  • Linkdin
  • Email

ಸಾರಾಂಶ

ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಅನಾಥ, ನಿರ್ಗತಿಕ ಶವಗಳ ಸಂಸ್ಕಾರವನ್ನು ಯಾವುದೇ ಫಲಾಪೇಕ್ಷೆಯಿಲ್ಲದೆ ಮಾಡುತ್ತಾ ಬಂದಿರುವ ಬಾಬು ಪಿಲಾರ್‌ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಚಿತ್ರಕಲೆಯನ್ನು ಕಲಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವಲ್ಲಿ ತೊಡಗಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿಯಿಂದ ಕೊನೆ ಕ್ಷಣದಲ್ಲಿ ವಂಚಿತರಾಗಿರುವ ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್‌ ಅವರಿಗೆ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ಜಿಲ್ಲಾ ಪ್ರಶಸ್ತಿಯನ್ನು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಫರೀದ್‌ ಗುರುವಾರ ಪ್ರದಾನ ಮಾಡಿದರು.ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಅನಾಥ, ನಿರ್ಗತಿಕ ಶವಗಳ ಸಂಸ್ಕಾರವನ್ನು ಯಾವುದೇ ಫಲಾಪೇಕ್ಷೆಯಿಲ್ಲದೆ ಮಾಡುತ್ತಾ ಬಂದಿರುವ ಬಾಬು ಪಿಲಾರ್‌ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಚಿತ್ರಕಲೆಯನ್ನು ಕಲಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವಲ್ಲಿ ತೊಡಗಿಕೊಂಡಿದ್ದಾರೆ.

ಬಾಬು ಪಿಲಾರ್‌ ಅವರನ್ನು ರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಈ ನಡುವೆ ಸುವರ್ಣ ಮಹೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾಗಿ ಬೆಂಗಳೂರಿನಿಂದ ಅಧಿಕಾರಿಗಳು ಕರೆ ಮಾಡಿ ತಿಳಿಸಿದ್ದರು. ಅದರಂತೆ ಬಾಬು ಅವರು ಬೆಂಗಳೂರಿಗೆ ತೆರಳಿದ್ದರು. ಆದರೆ ಅಲ್ಲಿ ಎಡವಟ್ಟು ಮಾಡಿಕೊಂಡ ಅಧಿಕಾರಿಗಳು ಕೊನೆ ಕ್ಷಣದಲ್ಲಿ ಬಾಬು ಪಿಲಾರ್‌ ಅವರಿಗೆ ಪ್ರಶಸ್ತಿ ನೀಡದೆ ಅವಮಾನ ಮಾಡಿದ್ದರು.

ಈ ಕುರಿತು ಗಮನ ಹರಿಸಿದ ಸ್ಪೀಕರ್ ಯು.ಟಿ. ಖಾದರ್‌ ಗುರುವಾರ ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಬಾಬು ಪಿಲಾರ್‌ ಅವರಿಗೆ ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು.