ಇಲ್ಲಿನ ಹಿರಿಯಡ್ಕದ ಶೀರೂರು ಮೂಲ ಮಠದಲ್ಲಿ ರಾಮ ನವಮಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಶುಕ್ರವಾರ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ಸಂಸ್ಥಾನ ಪೂಜೆ ನಡೆಯಿತು.
ಉಡುಪಿ: ಇಲ್ಲಿನ ಹಿರಿಯಡ್ಕದ ಶೀರೂರು ಮೂಲ ಮಠದಲ್ಲಿ ರಾಮ ನವಮಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಶುಕ್ರವಾರ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ಸಂಸ್ಥಾನ ಪೂಜೆ ನಡೆಯಿತು.
ಭಕ್ತರಿಂದ ವಿಷ್ಣುಸಹಸ್ರನಾಮ ಪಾರಾಯಣ ನಡೆಯಿತು. ಆಂಜನೇಯ ದೇವರಿಗೆ ವಿಶೇಷ ಪೂಜೆ ಮಾಡಲಾಯಿತು. ನಂತರ ಪಲ್ಲಪೂಜೆ ಮಾಡಿ ಮಹಾ ಅನ್ನಸಂತರ್ಪಣೆ ಮಾಡಲಾಯಿತು. ಶೀರೂರು ಮಠದ ದಿವಾನ ಡಾ. ಉದಯ ಕುಮಾರ ಸರಳತ್ತಾಯ ಉಪಸ್ಥಿತರಿದ್ದರು.