ಗಂಗೊಳ್ಳಿ: ಶಾರದೋತ್ಸವದಲ್ಲಿ ರಾಮ ಮಂದಿರ ಸ್ತಬ್ಧ ಚಿತ್ರ ಪ್ರದರ್ಶನ

| Published : Oct 17 2024, 12:03 AM IST

ಗಂಗೊಳ್ಳಿ: ಶಾರದೋತ್ಸವದಲ್ಲಿ ರಾಮ ಮಂದಿರ ಸ್ತಬ್ಧ ಚಿತ್ರ ಪ್ರದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ತನ್ನ ಜನ ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಕನ್ನಡಪ್ರಭ ವಾರ್ತೆ ಬೈಂದೂರು

ಇಲ್ಲಿನ ಗಂಗೊಳ್ಳಿಯ ಸಾರ್ವಜನಿಕ ಶ್ರೀ ಶಾರದೋತ್ಸವದ ಸುವರ್ಣ ಮಹೋತ್ಸವದ ಮೆರವಣಿಗೆಯಲ್ಲಿ ಗಂಗೊಳ್ಳಿಯ ಟೀಮ್ ವಿಶ್ವಸಾಗರ ಪ್ರದರ್ಶಿಸಿದ ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ತನ್ನ ಸೌಂದರ್ಯದಿಂದ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಧನುರ್ಧಾರಿ ರಾಮನ ಪ್ರತಿಕೃತಿ ಮತ್ತು ರಾಮ ಸ್ಮರಣೆಯ ಮೌಲಿಕ ನುಡಿಗಳ ಜೊತೆಯಲ್ಲಿ ಇತ್ತೀಚೆಗಷ್ಟೇ ನಿಧನರಾದ ಪ್ರಾಮಾಣಿಕತೆ ಮತ್ತು ಯಶಸ್ಸಿನ ಪ್ರೇರಕ ಶಕ್ತಿಯಾಗಿ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ರತನ್ ಟಾಟಾ ಅವರ ಭಾವಚಿತ್ರವನ್ನು ಬಳಸಿಕೊಂಡು ನುಡಿ ನಮನಗಳನ್ನು ಸಲ್ಲಿಸಿದ್ದು ವಿಶೇಷವಾಗಿ ಗಮನ ಸೆಳೆಯಿತು.