ಚುನಾವಣೆ, ನೀತಿಸಂಹಿತೆ ಹಿನ್ನೆಲೆ ಕಾಮಗಾರಿಗಳಿಗೆ ವೇಗ ಸಿಕ್ಕಿಲ್ಲ: ರಮ್ಯ ನರಸಿಂಹಮೂರ್ತಿಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕ ಎಚ್.ಸಿ. ಬಾಲಕೃಷ್ಣರವರು ಈಗಾಗಲೇ ಮುಖ್ಯಮಂತ್ರಿ ವಿಶೇಷ ಅನುದಾನದಡಿ 25 ಕೋಟಿ ರು. ಅನುದಾನವನ್ನು ತಂದಿದ್ದು, ಅದರಲ್ಲಿ ಮಾಗಡಿ ಪುರಸಭಾ ವ್ಯಾಪ್ತಿಯಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿಗೆ 4.5 ಕೋಟಿ ರು. ಅನುದಾನ ಕೊಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯವಾಗಿ ವಾರ್ಡ್ಗಳಿಗೆ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಾಣದ ಕೆಲಸ ಆಗಲಿದ್ದು, ಪಟ್ಟಣದ ಜ್ಯೋತಿನಗರದ ವಾರ್ಡ್ ಗೆ 1.25 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತ ರಸ್ತೆ, ಚರಂಡಿ ನಿರ್ಮಿಸಲಾಗುತ್ತದೆ.