ಪೋಷಕರು ಪರ ಭಾಷಾ ವ್ಯಾಮೋಹ ಬಿಟ್ಟು ಮಕ್ಕಳಿಗೆ ಚಿಕ್ಕಂದಿನಿಂದಲೇ ಕನ್ನಡದಲ್ಲಿ ಮಾತನಾಡುವುದನ್ನು ಕಲಿಸಿಕೊಡುವಂತೆ ಆಕಾಶವಾಣಿ ಕಲಾವಿದ ಹಾಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿಕ್ಕಮರೀಗೌಡ ತಿಳಿಸಿದರು.
ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿರುವುದು ಭವಿಷ್ಯ ಅಲ್ಲ, ವಾಸ್ತವ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದರು.
ಡಿ.ಕೆ. ಸಹೋದರರು ಅಪೂರ್ವ ಸಹೋದರರು ಎಂದು ವ್ಯಂಗ್ಯವಾಡಿದ್ದಾರೆ. ಹೌದು, ನಾನು ಹಾಗೂ ನನ್ನ ಅಣ್ಣ ಅಪೂರ್ವ ಸಹೋದರರೆ. ನಾವು ದೇವೇಗೌಡರ ವಂಶದಂತೆ ಅಲ್ಲ. ಕುಮಾರಸ್ವಾಮಿ ಬ್ರದರ್ಸ್ ರೀತಿ ಅಲ್ಲ- ಮಾಜಿ ಸಂಸದ ಡಿ.ಕೆ. ಸುರೇಶ್ ತಿರುಗೇಟು
ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದ ಸೋಮವಾರ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಹಾಗೂ ಎನ್ಡಿಎ ನಾಯಕರು ಭರ್ಜರಿ ಪ್ರಚಾರ ನಡೆಸಿ ತಮ್ಮ, ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಿದರು. ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಮತದಾರರ ಒಲವು ಗಳಿಸಲು ಅಂತಿಮ ಕಸರತ್ತು ನಡೆಸಿದರು.
ಎಚ್.ಡಿ.ದೇವೇಗೌಡರ ಕುಟುಂಬವನ್ನೇ ಕೊಂಡುಕೊಳ್ಳುವ ಬಗ್ಗೆ ಜಮೀರ್ ಅಹಮದ್ ಖಾನ್ ಮಾತನಾಡಿದ್ದಾರೆ.ಈ ದೇಶದ ಪ್ರಧಾನಿ ಆಗಿದ್ದವರನ್ನು ಖರೀದಿ ಮಾಡುತ್ತೇನೆ ಎನ್ನುವ ಅವರ ಮಾತಿನ ಅರ್ಥವೇನು. ನಿನಗೆ ಧೈರ್ಯ ಇದ್ದರೆ ಬಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲೆಸೆದರು.