ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆರಾಮನಗರ: ಚುನಾವಣೆಗೆ ನಿಯೋಜಿಸಲಾದ ವೀಕ್ಷಕರು ಕೇಂದ್ರ ಚುನಾವಣಾ ಆಯೋಗದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುತ್ತಾರೆ. ಚುನಾವಣಾ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಕಾಲಕ್ಕೆ ಚುನಾವಣಾ ಆಯೋಗ ಹೊರಡಿಸುವ ಮಾರ್ಗಸೂಚಿಗಳಂತೆ ಕರ್ತವ್ಯ ನಿರ್ವಹಿಸಿ ವರದಿ ಮಾಡುವ ಕೆಲಸ ಮಾಡುತ್ತಾರೆ ಎಂದು ಚನ್ನಪಟ್ಟಣ ಉಪ ಚುನಾವಣೆಗೆ ಖರ್ಚು ವೆಚ್ಚಗಳ ವೀಕ್ಷಕರಾಗಿ ನಿಯೋಜಿಸಲಾಗಿರುವ ಐಆರ್ಎಸ್ ಅಧಿಕಾರಿ ಪ್ರಶಾಂತ್ ಗಡೇಕರ್ ತಿಳಿಸಿದರು.