ಶ್ರೀ ಬೈಲಾಂಜನೇಯಸ್ವಾಮಿ ಅದ್ಧೂರಿ ಬ್ರಹ್ಮರಥೋತ್ಸವ ಸಂಪನ್ನವಾಡಿಕೆಯಂತೆ ಎಲ್ಲಾ ಸಮುದಾಯದ ಭಕ್ತರು ಒಂದೆಡೆ ಸೇರಿ ಅದ್ಧೂರಿಯಾಗಿ ರಥೋತ್ಸವ ನಡೆಸಿಕೊಂಡು ಬರುತ್ತಾರೆ. ರಥೋತ್ಸವದಲ್ಲಿ ನೆರೆದಿದ್ದ ಸಾವಿರಾರು ಭಕ್ತರು ತಮ್ಮ ಹರಕೆಗಳನ್ನು ತೀರಿಸಿದರು, ರಥಕ್ಕೆ ಬಾಳೆಹಣ್ಣು, ದವನ ಹಾಗೂ ಹೋಮ ಕುಂಡಕ್ಕೆ ಹರಳು ಮತ್ತು ಎಳ್ಳನ್ನು ಹಾಕುವ ಮೂಲಕ ತಮ್ಮ ಹರಕೆ ಸೇವೆಯನ್ನು ಸ್ವಾಮಿಗೆ ಅರ್ಪಿಸಿದರು.