ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದರ ಬೆನ್ನ ಹಿಂದೆಯೇ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.