ರಾಮನಗರದಲ್ಲಿಯೇ ರೇಷ್ಮೆಗೂಡು ಮಾರುಕಟ್ಟೆ ಮುಂದುವರಿಯಲಿರಾಮನಗರ: ರಾಮನಗರದ ರೇಷ್ಮೆಗೂಡಿನ ಮಾರುಕಟ್ಟೆ ಅಚ್ಚುಕಟ್ಟಾಗಿದ್ದು, ಪಾರದರ್ಶಕವಾಗಿ ನಡೆಯುತ್ತಿದೆ. ಹೈಟೆಕ್ ಮಾರುಕಟ್ಟೆ ಹೆಸರಿನಲ್ಲಿ ಈ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ತಿಳಿಸಿದರು.