ಜೆಎಸ್ಎಸ್ ಆಸ್ಪತ್ರೆ ವೈದ್ಯರ ಪ್ರತಿಭಟನೆ

| Published : Aug 18 2024, 01:49 AM IST

ಸಾರಾಂಶ

ಅತ್ಯಾಚಾರಿಗಳಿಗೆ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು

ಕನ್ನಡಪ್ರಭ ವಾರ್ತೆ ಮೈಸೂರು

ಕರ್ತವ್ಯದಲ್ಲಿರುವಾಗಲೇ ಕೊಲ್ಕತ್ತಾದ ಆರ್.ಜಿ. ಕೆಎಆರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದ ವಿರುದ್ಧ ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳು ಮತ್ತು ವೈದ್ಯರು ಶನಿವಾರ ಒಂದು ದಿನ ಹೊರರೋಗಿ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟಿಸಿದರು.

ಇದೇ ವೇಳೆ ಅತ್ಯಾಚಾರಿಗಳಿಗೆ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೆಎಸ್ಎಸ್ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಎಚ್. ಬಸವನಗೌಡಪ್ಪ, ಜೆಎಸ್ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ. ಮಧು, ಉಪ ಪ್ರಾಂಶುಪಾಲ ಡಾ. ಮಾಂತಪ್ಪ, ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.