ಸಾರಾಂಶ
ಯಾದಗಿರಿ: ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ಯಾವ ನ್ಯಾಯಬೆಲೆ ಅಂಗಡಿಯಿಂದ ಆಹಾರ ಧಾನ್ಯ ಪಡೆಯುತ್ತಿರುವ, ಅಂತಹ ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯ ಮಾಡಿಸಲು ತಿಳಿಸಿದ್ದಾರೆ. ಇ-ಕೆವೈಸಿ ಮಾಡಿಸುವ ಸಮಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಸಲ್ಲಿಸಲು ತಿಳಿಸಲಾಗಿದೆ. ಈ ಕಾರ್ಯ ಉಚಿತವಾಗಿದೆ, ಈ ಸಂಬಂಧ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಮಾನ್ಯ ಆಯುಕ್ತರ ಕಚೇರಿಯ ಟೋಲ್ ಫ್ರೀ ದೂರವಾಣಿ ಸಂಖ್ಯೆ 1967ಗೆ ಉಪ ನಿರ್ದೇಶಕರ ಕಚೇರಿ, ಆಹಾರ ಇಲಾಖೆ, ಸಂಬಂಧಪಟ್ಟ ತಾಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
-----23ವೈಡಿಆರ್2 : ಡಾ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ.